News Kannada
Sunday, September 24 2023
ಬೆಂಗಳೂರು ನಗರ

ಬೆಂಗಳೂರು: ಗಡಿ ವಿವಾದ, ಬೆಳಗಾವಿಯ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರ ಬಂಧನ

Indefinite strike by transport employees from March 24, another headache for the government
Photo Credit : Pixabay

ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಬಗ್ಗೆ ಕನ್ನಡ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿದ್ದು, ಮಹಾರಾಷ್ಟ್ರ ನೋಂದಣಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಟ್ರಕ್ ಗಳ ಮೇಲೆ ಉದ್ರಿಕ್ತ ಗುಂಪು ದಾಳಿ ನಡೆಸಿದೆ.

ಹಿಂಸಾಚಾರದ ನಂತರ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಮತ್ತು ನೂರಾರು ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸರ ಪ್ರಕಾರ, ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಾರ್ಯಕರ್ತರು ಮಹಾರಾಷ್ಟ್ರದ ಕಡೆಗೆ ಚಲಿಸುತ್ತಿದ್ದ ಐದು ಟ್ರಕ್ ಗಳ ಮೇಲೆ ಕಲ್ಲುಗಳನ್ನು ಎಸೆದಿದ್ದರು.

ಅವರು ಟ್ರಕ್ ಗಳ ಮೇಲೆ ಹತ್ತಿ ಮಹಾರಾಷ್ಟ್ರದ ರಾಜಕಾರಣಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಅವರು ನೋಂದಣಿ ಫಲಕಗಳನ್ನು ಕಿತ್ತು ವಾಹನಗಳಿಗೆ ಕಪ್ಪು ಬಣ್ಣ ಬಳಿದರು.

ಪ್ರತಿಭಟನಾಕಾರರು ಕನ್ನಡ ಬಾವುಟಗಳೊಂದಿಗೆ ಪೊಲೀಸ್ ವಾಹನಗಳ ಮೇಲೆ ಹತ್ತಿ ಘೋಷಣೆಗಳನ್ನು ಕೂಗಿದರು.

ಮಹಾರಾಷ್ಟ್ರದ ಮಂತ್ರಿಗಳು ತಮ್ಮ ಭೇಟಿಯನ್ನು ನಿಲ್ಲಿಸುತ್ತಿದ್ದಂತೆ, ಕರ್ನಾಟಕದ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕನ್ನಡ ಹೋರಾಟಗಾರರನ್ನು ಬೆಳಗಾವಿ ನಗರವನ್ನು ಪ್ರವೇಶಿಸದಂತೆ ತಡೆದರು.

See also  ಇತಿಹಾಸದ ಸತ್ಯವನ್ನು ತಿಳಿಸುವ ಉದ್ದೇಶದಿಂದ ಹೊರಬಂದ ಕಾದಂಬರಿ "ಆವರಣ"
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು