News Kannada
Wednesday, May 31 2023
ಬೆಂಗಳೂರು ನಗರ

ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸುವ ಕ್ರಮವಾಗಿ, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ 

As a move to increase the quantum of punishment for the offenders, a university of forensic sciences has been set up. 
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ, ಪ್ರಮಾಣ ಹೆಚ್ಚಿಸುವಲ್ಲಿ, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ, ಗಣನೀಯ ಸೇವೆ ಸಲ್ಲಿಸಲಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಹೇಳಿದ್ದಾರೆ.

ನಾಳೆ, ಶನಿವಾರ ದಂದು, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ರವರು, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಸ್ಥಾಪನೆ ಸಂಬಂಧ, ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ, ಶಂಕು ಸ್ಥಾಪನೆ ನೆರವೇರಿಸಲಿದ್ದು, ಅಪರಾಧ ಪತ್ತೆ ಪ್ರಕರಣದ ತನಿಖೆಗೆ ಸಹಾಯಕವಾಗುವ ನಿಟ್ಟಿನಲ್ಲಿ, ಪ್ರಮುಖ ಮೈಲಿಗಲ್ಲು ಆಗಲಿದೆ, ಎಂದಿದ್ದಾರೆ.

ಅಪರಾಧ ಪತ್ತೆ ಪ್ರಕ್ರಿಯೆಯಲ್ಲಿ, ಆಧುನಿಕ ತಂತ್ರಜ್ಞಾನದ ಬಳಕೆ ಅತ್ಯಂತ ಪರಿಣಾಮಕಾರಿ ಫಲಿತಾಂಶ ನೀಡಲಿದ್ದು, ನ್ಯಾಯಾಲಯಗಳೂ, ಈ ಸಂಬಂಧ, ಉತ್ತೇಜನ ನೀಡುತ್ತಿವೆ, ಎಂದಿರುವ, ಸಚಿವರು, ರಾಜ್ಯ ಸರಕಾರ, ಈ ಸಂಬಂಧ, ತರಬೇತಿ ಪಡೆದ ಮಾನವ ಸಂಪನ್ಮೂಲ, ನಿರ್ಮಾಣಕ್ಕೆ ಆದ್ಯತೆ ನೀಡಿದೆ, ಎಂದಿದ್ದಾರೆ.

ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಕುರಿತು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇತ್ತೀಚೆಗೆ, ಅಹಮದಾಬಾದ್ ನಲ್ಲಿರುವ, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಕೇಂದ್ರಕ್ಕೆ, ರಾಜ್ಯದ ಹಿರಿಯ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದರು.

ರಾಜ್ಯದಲ್ಲಿ, ಉದ್ದೇಶಿತ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ, ಸಂಪೂರ್ಣವಾಗಿ, ಕೇಂದ್ರದ ಅನುದಾನದ ನೆರವಿನೊಂದಿಗೆ ಸ್ಥಾಪನೆಗೊಳ್ಳುತ್ತಿದೆ.

See also  ಬೆಂಗಳೂರು: ಬಿಎನ್ ಜಿ-ಎಂವೈಎಸ್ ರಾಷ್ಟ್ರೀಯ ಹೆದ್ದಾರಿ ವಿರುದ್ಧ ನಿತಿನ್ ಗಡ್ಕರಿಗೆ ಬೊಮ್ಮಾಯಿ ದೂರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು