News Kannada
Friday, March 24 2023

ಬೆಂಗಳೂರು ನಗರ

ಬೆಂಗಳೂರು: ವಸತಿ ಶಾಲೆ ನೌಕರರ ಬೇಡಿಕೆ ಈಡೇರಿಸುವ ಭರವಸೆ

Bengaluru: Residential school employees' demands to be met
Photo Credit : By Author

ಬೆಂಗಳೂರು: ವಸತಿ ಶಾಲೆಗಳ ನೌಕರರ ಸಂಘದ ಬಾಕಿ ಬೇಡಿಕೆಗಳನ್ನು ಮುಂಬರುವ ಬಜೆಟ್ ನಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಿದ ಸಚಿವರನ್ನು ವಸತಿ ಶಾಲೆಗಳ ನೌಕರರ ಸಂಘದಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಂಘದ ಬೇಡಿಕೆಗಳನ್ನು ಈಡೇರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ವಸತಿ ಶಾಲೆಗಳ ಬಹುದಿನಗಳ ಬೇಡಿಕೆಗಳಾದ ಗಣಕೀಕೃತ ಕೌನ್ಸಿಲಿಂಗ್ ಮೂಲಕ ವರ್ಗಾವಣೆ, ವಿವಿಧ ವೃಂದಗಳ ನೌಕರರಿಗೆ ಮುಂಬಡ್ತಿ ಮತ್ತು ಎನ್ ಪಿಎಸ್ ಯೋಜನೆಯ ಸರ್ಕಾರದ ವಂತಿಗೆಯನ್ನು ಶೇ.14 ಕ್ಕೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಸಮ್ಮುಖದಲ್ಲಿ ವಸತಿ ಶಾಲೆಗಳ ನೌಕರರ ಸಂಘದಿಂದ ಅಭಿನಂದನೆ ಸಲ್ಲಿಸಲಾಯಿತು.

ವಸತಿ ಶಾಲೆಗಳ ನೌಕರರ ಸಂಘ ರಾಜ್ಯಾಧ್ಯಕ್ಷ ಪಿ.ಎನ್. ರವಿಚಂದ್ರ, ಪ್ರಧಾನ ಕಾರ್ಯುದರ್ಶಿ ನಟರಾಜ್ ಪಿ.ಕೆ, ಉಪಾಧ್ಯಕ್ಷ ಲಕ್ಷ್ಮಿ ಶೆಟ್ಟಿ, ಸಹ ಕಾರ್ಯದರ್ಶಿ ದೀಪ ಎ. ಮುಂತಾದವರು ಉಪಸ್ಥಿತರಿದ್ದರು.

See also  ಬಂಟ್ವಾಳ: ಆ.27ರಿಂದ 29ರ ವರೆಗೆ ಸಿಪಿಐ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ 24ನೇ ಸಮ್ಮೇಳನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು