News Kannada
Friday, March 24 2023

ಬೆಂಗಳೂರು ನಗರ

ಮಲ್ಲೇಶ್ವರ: ಸ್ಯಾಂಕಿ ಕೆರೆ ಆವರಣದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ

ನಮ್ಮ ಕ್ಲಿನಿಕ್
Photo Credit : G Mohan

ಬೆಂಗಳೂರು: ಮಲ್ಲೇಶ್ವರದ ಸ್ಯಾಂಕಿ ಕೆರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ನಮ್ಮ ಕ್ಲಿನಿಕ್ ಗೆ ಸ್ಥಳೀಯ ಶಾಸಕ ಮತ್ತು ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಸ್ಯಾಂಕಿ ಕೆರೆ ನಡಿಗೆದಾರರ ಸಂಘದ ಸದಸ್ಯರ ಕೈಯಿಂದಲೇ ಈ ನೂತನ ಆಸ್ಪತ್ರೆಗೆ ಹಸಿರು ನಿಶಾನೆ ತೋರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಲ್ಲೇಶ್ವರ ವ್ಯಾಪ್ತಿಯಲ್ಲಿ 15 ವರ್ಷಗಳ ಹಿಂದೆ ಕೇವಲ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದವು. ಈಗ ತಲಾ 7 ನಮ್ಮ ಕ್ಲಿನಿಕ್ ಮತ್ತು ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದಿವೆ ಎಂದರು.

ಇವುಗಳ ಪೈಕಿ ತಲಾ 5 ನಮ್ಮ ಕ್ಲಿನಿಕ್ ಮತ್ತು ಸಿಯುಪಿಎಚ್ಸಿ ಈಗಾಗಲೇ ಕಾರ್ಯಾರಂಭ ಮಾಡುತ್ತಿವೆ. ಉಳಿದ 4 ಆರೋಗ್ಯ ಕೇಂದ್ರಗಳು ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಗೊಳ್ಳಲಿವೆ ಎಂದು ಅವರು ಹೇಳಿದರು.

ಸ್ಯಾಂಕಿ ಕೆರೆ ಆವರಣದಲ್ಲಿ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಬರುವವರ ಸಂಖ್ಯೆ ಜಾಸ್ತಿ ಇರುತ್ತದೆ. ಹೀಗಾಗಿ ಇಲ್ಲಿನ ನಮ್ಮ ಕ್ಲಿನಿಕ್ ಬೆಳಿಗ್ಗೆ 6:45 ರಿಂದ 10:30ರವರೆಗೆ ಮತ್ತು ಸಂಜೆ 4ರಿಂದ ರಾತ್ರಿ 7 ಗಂಟೆಯವರೆಗೆ ಕಾರ್ಯ ನಿರ್ವಹಿಸುವ ಅನುಕೂಲವನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಆಸ್ಪತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ತುರ್ತು ಪರಿಸ್ಥಿತಿಗಳಲ್ಲಿ ಕೂಡಲೇ ಪ್ರಥಮ ಚಿಕಿತ್ಸೆ ಮತ್ತು ಅಗತ್ಯ ಪರೀಕ್ಷೆಗಳನ್ನು ನಡೆಸಲು ಸೌಲಭ್ಯವಿದೆ. ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಅವರು ಹೇಳಿದರು.

ಇಂತಹ ಕ್ಲಿನಿಕ್ ಗಳನ್ನು ಬೆಂಗಳೂರು ನಗರದ ಎಲ್ಲಾ 243 ವಾರ್ಡ್ಗಳಲ್ಲಿ ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಕೂಡ ಬಿಜೆಪಿ ಸರ್ಕಾರವು ಆರಂಭಿಸಿದೆ. ಇದರಿಂದ ಜನರನ್ನು ಆರೋಗ್ಯವಾಗಿ ಕಾಪಾಡುವ ವ್ಯವಸ್ಥೆ ಅಭಿವೃದ್ಧಿ ಹೊಂದಲಿದೆ ಎಂದು ಸಚಿವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸುಚೇತಾ, ಉತ್ತರ ಬೆಂಗಳೂರು ಬಿಜೆಪಿ ಉಪಾಧ್ಯಕ್ಷ ಡಾ. ವಾಸು, ಮಂಡಲ ಬಿಜೆಪಿ ನಾಯಕಿ ಕಾವೇರಿ ಕೇದಾರನಾಥ್, ಸದಾಶಿವನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಇಂದೂ ಶ್ರೀಧರ್, ಲಕ್ಷ್ಮಣ್ ರಾವ್, ಜಯಪ್ರಕಾಶ್, ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

See also  ಸ್ವಾಮೀಜಿಗಳ ಬಳಿ ಲಂಚ ಕೇಳುವ ನಾಚಿಕೆಗೇಡಿನ ಸರ್ಕಾರ: ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

31125

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು