News Kannada
Friday, March 24 2023

ಬೆಂಗಳೂರು ನಗರ

ದೇಶಕ್ಕೆ ಆರ್ಥಿಕ ಬಲ ನೀಡುವುದರಲ್ಲಿ ಕರ್ನಾಟಕ ರಾಜ್ಯ ಮೇಲಿನ ಸ್ಥಾನದಲ್ಲಿದೆ- ರಾಜನಾಥ್‌ ಸಿಂಗ್‌

Photo Credit : By Author

ಬೆಂಗಳೂರು : ಏರೋ ಇಂಡಿಯಾ ಆಯೋಜನೆಯು ರಕ್ಷಣಾ ಕ್ಷೇತ್ರಕ್ಕೆ ಬಹುದೊಡ್ಡ ಉತ್ತೇಜನ ನೀಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರದಿಂದ ಆರಂಭವಾಗಲಿರುವ ಏರೋ ಇಂಡಿಯಾ 2023ರ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಏರೋ ಇಂಡಿಯಾ ಆಯೋಜನೆ ಆಗುತ್ತಿರುವುದು ಇಲ್ಲಿನ ಕೌಶಲ್ಯಯುತ ಯುವಕರಿಗೆ ಉದ್ಯೋಗ ಸೃಜನೆ ಮಾಡಲು ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಸಿಎಂ ಬಸವರಾಜ್​ ಬೊಮ್ಮಾಯಿಯವರಿಂದ ಇದು ಸಾಧ್ಯವಾಗಿದೆ. ಏರೋ ಇಂಡಿಯಾ ದೇಶದ ಐಟಿ ಕ್ಯಾಪಿಟಲ್​ನಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ನಾಯಕರು ಆಗಮಿಸುತ್ತಿದ್ದಾರೆ. ನಮ್ಮ ಉತ್ಪಾದನೆ ಹಾಗೂ ಕೌಶಲ್ಯಗಳ ಪ್ರದರ್ಶನ ಮಾಡೋಕೆ ಇದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ, ದೇಶಕ್ಕೆ ಆರ್ಥಿಕ ಬಲ ನೀಡುವುದರಲ್ಲಿ ಮೇಲಿನ ಸ್ಥಾನದಲ್ಲಿದೆ. ರಾಜ್ಯ, ಸೇನೆಗೆ ಬೇಕಾದ ಅನೇಕ ಕಂಪನಿಗಳಿಗೆ ಜಾಗ ನೀಡಿದೆ. ರಾಜ್ಯ ಐಟಿ ಉತ್ಪಾದನಾ ಕ್ಯಾಪಿಟಲ್ ಆಗಿದೆ. 100ಕ್ಕೂ ಅಧಿಕ ಫ್ರೆಂಡ್ಲಿ ಕಂಟ್ರಿಗಳು ಈ ಶೋದಲ್ಲಿ ಭಾಗಿಯಾಗುತ್ತವೆ. ಕಳೆದ ಎಲ್ಲ ವರ್ಷಗಳ ಏರೋ ಇಂಡಿಯಾ ದಾಖಲೆಗಳನ್ನು ಈ ಶೋ ಮುರಿಯಲಿದೆ. ವಿಂಗ್ಸ್ ಆಫ್​ದ ಫ್ರೂಚರ್ ಹೆಸರನಲ್ಲಿ ಇಂಡಿಯಾ‌ ಪೆವಿಲಿಯನ್ ಕಾಣಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

 

See also  ಸಾಲುಮರದ ತಿಮ್ಮಕ್ಕ‌ ಅವರಿಗೆ ಮತ್ತೆ ಪೆಟ್ಟು; ಆಸ್ಪತ್ರೆಯಲ್ಲಿ ಹಾಸಿಗೆಗೆ ಪರದಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು