News Kannada
Tuesday, March 28 2023

ಬೆಂಗಳೂರು ನಗರ

ಬೆಂಗಳೂರು; ಕೆ.ಜಿ.ಎಫ್ ಬಾಬು ವಿರುದ್ಧ ವಕ್ಫ್ ಆಸ್ತಿ ಕಬಳಿಸಿದ ಆರೋಪ

ಕೆ.ಜಿ.ಎಫ್ ಬಾಬು
Photo Credit : By Author

ಬೆಂಗಳೂರು; ಜನ ಸಾಮಾನ್ಯರಿಗೆ ಸಹಾಯ ಮಾಡುವುದಾಗಿ ಸಮಾಜ ಸೇವಕನ ಮುಖವಾಡ ಧರಿಸಿರುವ ಕೆ.ಜಿ.ಎಫ್ ಬಾಬು (ಗುಜರಿ ಬಾಬು) ಬೆಂಗಳೂರಿನ ಕೆ.ಎಚ್. ರಸ್ತೆಯ ಎಂ.ಟಿ.ಆರ್ ಹೊಟೇಲ್ ಎದುರು ವಕ್ಫ್ ಮಂಡಳಿಗೆ ಸೇರಿದ ಬಡಾ ಮಕಾನ್ ದರ್ಗಾದ 33 ಸಾವಿರ ಚದರಡಿ ಭೂಮಿಯನ್ನು ಬೆದರಿಕೆ, ಮಾರಕಾಸ್ತ್ರಗಳ ಬಳಕೆ, ಕಾನೂನು ಬಾಹಿರ ಕ್ರಮಗಳ ಮೂಲಕ ಸ್ವಾಧೀನಪಡಿಸಿಕೊಂಡಿದ್ದು, ಇವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಮತ್ತು ದಿ ಹೆಲ್ಪಿಂಗ್ ಸಿಟಿಜನ್ ಅಂಡ್ ಪೀಪಲ್ಸ್ ಕೋರ್ಟ್ ಸಂಘಟನೆಯ ಅಧ್ಯಕ್ಷ ಆಲಂ ಪಾಷ ಕ್ರಿಮಿನಲ್ ದೂರು ಸಲ್ಲಿಸಿದ್ದಾರೆ.

ಕೆ.ಜಿ.ಎಫ್ ಬಾಬು ಅವರ ಕಾನೂನು ಬಾಹಿರ ಕೃತ್ಯಕ್ಕೆ ನೆರವಾಗಿರುವ ವಕ್ಪ್ ಮಂಡಳಿ ಅಧ್ಯಕ್ಷ ಮೌಲಾನ ಶಫಿ ಸಾದಿ ಅವರ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಕೂಡಲೇ ಕೆ.ಜಿ.ಎಫ್ ಬಾಬು ಮತ್ತು ಮೌಲಾನ ಶಫಿ ಸಾದಿ ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಲಂ ಪಾಷ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಲಂ ಪಾಷ, ವಕ್ಫ್ ಆಸ್ತಿಯನ್ನು ರಕ್ಷಿಸಬೇಕಿದ್ದ ಮೌಲಾನ ಶಫಿ ಸಾದಿ ಅವರು ಗುಜರಿಬಾಬು ಅವರ ದುಷ್ಕೃತ್ಯಕ್ಕೆ ನೇರವಾಗಿ ಬೆಂಬಲಕ್ಕೆ ನಿಂತಿದ್ದಾರೆ. ವಕ್ಫ್ ಮಂಡಳಿ ಅಧ್ಯಕ್ಷರು ಅಲ್ಲಾ ಆಸ್ತಿ (ವಕ್ತ್ ಆಸ್ತಿ) ಕಬಳಿಕೆಗೆ ರಾಜಾರೋಷವಾಗಿ ಬೆಂಬಲಕ್ಕೆ ನಿಂತಿದ್ದಾರೆ ಎಂದರು.

ಸಮಾಜದ ವಿಚಿದ್ರಕಾರಿ ಶಕ್ತಿಗಳು ಗುಜರಿ ಬಾಬು ನೇತೃತ್ವದಲ್ಲಿ ಬಡಾ ಮಕಾನ್ ದರ್ಗಾಕ್ಕೆ ಸೇರಿದ ಕಟ್ಟಡಗಳನ್ನು ಧ್ವಂಸಗೊಳಿಸಿವೆ. ಜನವರಿ 27 ರಿಂದ ಫೆಬ್ರವರಿ 3 ರ ಅವಧಿಯಲ್ಲಿ ಈ ಕೃತ್ಯ ನಡೆದಿದ್ದು, ಇವರ ನೇತೃತ್ವದಲ್ಲಿ ಹಲವು ಮಂದಿ ಅಪಾಯಕಾರಿ ಮಾರಕಾಸ್ತ್ರಗಳೊಂದಿಗೆ ತೆರಳಿ, ಜೆಸಿಬಿ ಮತ್ತಿತರ ಯಂತ್ರಗಳ ಮೂಲಕ ಕಟ್ಟಡಗಳನ್ನು ಕೆಡವಿ, ಸರಕು ಸಾಗಾಣೆ ವಾಹನಗಳ ಅವಶೇಷಗಳನ್ನು ಸಾಗಾಟ ಮಾಡಿದ್ದಾರೆ. ಇದರಿಂದ ಅಸಂಖ್ಯಾತ ಮಸ್ಲಿಂ ಸಮುದಾಯಕ್ಕೆ ಮಾನಸಿಕವಾಗಿ ಆಘಾತವಾಗಿದೆ. ಇದನ್ನು ತಡೆಯಲು ತಾವು ಸ್ಥಳಕ್ಕೆ ತೆರಳಿದಾಗ ತಮ್ಮ ಮೇಲೂ ಬೆದರಿಕೆ ಮತ್ತು ಹಲ್ಲೆ ನಡೆಸುವ ಪ್ರಯತ್ನ ನಡೆಸಿದರು. ನಂತರ ನ್ಯಾಯಕ್ಕಾಗಿ ಪೊಲೀಸರಿಗೆ ದೂರು ಸಲ್ಲಿಸಬೇಕಾಯಿತು ಎಂದು ಆಲಂ ಪಾಷ ಹೇಳಿದ್ದಾರೆ.

See also  ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಸಿಹಿಸುದ್ದಿ ನೀಡಿದ ಡಾ.ಕೆ. ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು