News Kannada
Wednesday, March 29 2023

ಬೆಂಗಳೂರು ನಗರ

ಐಕಳ ಹರೀಶ್ ಶೆಟ್ಟಿ ಅವರ ನಾಯಕತ್ವದ ಹೋರಾಟಕ್ಕೆ ಸಿಎಂ ಬೊಮ್ಮಾಯಿ ಅವರಿಂದ ಸಕಾರಾತ್ಮಕ ಸ್ಪಂದನೆ

CM Bommai gives positive response to Aikala Harish Shetty's leadership struggle
Photo Credit : News Kannada

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಕೂಲಂಕುಶವಾಗಿ ಮಾತುಕತೆ ಮಾಡಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನು ಬಿಡುಗಡೆಗೊಳಿಸಿದರು.

ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ, ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ.

ದಿನಾಂಕ 07.03.2023 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ ಐಕಳ ಹರೀಶ್ ಶೆಟ್ಟಿ ಯವರ ಜೊತೆ ನಡೆಸಿದ ವಿಸ್ತೃತವಾದ ಮಾತುಕತೆಯ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.

ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಜೊತೆಯಾದರು.

See also  ಗುರುಗ್ರಾಮ: ಟ್ರ್ಯಾಕ್ಟರ್ ನಿಂದ ಬಿದ್ದು ಬಿದ್ದು ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು