News Kannada
Tuesday, May 30 2023
ಬೆಂಗಳೂರು ನಗರ

ಕರಾವಳಿಯ ಕೆಲ ಶಾಸಕರಿಗೆ ಟಿಕೇಟ್‌ ಕೈತಪ್ಪುವ ಸಾಧ್ಯತೆ: ಮಹತ್ವ ಪಡೆದ ಶಾ ಮೀಟಿಂಗ್‌

Some MLAs from coastal karnataka likely to lose tickets: Shah
Photo Credit : News Kannada

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ಕೆಲ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆಯಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ಕುರಿತು, ಈಚೆಗೆ ಮೊದಲ ಹಂತದ ಸಭೆಯೊಂದು ನಡೆದಿದೆ.

ಕರಾವಳಿ ಜಿಲ್ಲೆಗಳಲ್ಲೂ ಕೆಲವ ರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ ಎದುರಾಗಿದೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಆಯ್ದ ಕೆಲವೇ ವ್ಯಕ್ತಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಆಡಳಿತ ವಿರೋಧಿ ಅಲೆ ಹಾಗೂ ಕ್ಷೇತ್ರ ವಿದ್ಯಮಾನಗಳು ಹಾಗೂ ಸಮೀಕ್ಷಾ ವಾರು ಶಾಸಕರ ಬಗ್ಗೆ ಇರುವ ಪ್ರತಿ ವರದಿ ಆಧರಿಸಿ ಚರ್ಚೆ ನಡೆದಿದೆ.

ಮಹತ್ವ ಪಡೆದ ಯಡಿಯೂರಪ್ಪ ಹೇಳಿಕೆ: ಹಾಲಿ ಶಾಸಕರೆಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂಬ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಕೆಲವು ದಿನಗಳ ಹಿಂದೆಯೇ ಹೇಳಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಪ್ರತೀ ತಿಂಗಳೂ ಅಮಿತ್ ಶಾ ರಾಜ್ಯದ ಬೆಳವಣಿಗೆಗೆ ಸಂಬಂಧಪಟ್ಟಂತೆ ವರದಿ ತರಿಸಿಕೊಂಡು ಎಲ್ಲ ವಿಧಾನಸಭಾ ಕ್ಷೇತ್ರಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದರ ಆಧಾರದ ಮೇಲೆ ಶಾಸಕರಿಗೆ ವಿರೋಧಿ ಅಲೆ ಇರುವುದು ದೃಢಪಟ್ಟಿದೆ. ಜತೆಗೆ ವಿಭಾಗೀಯ ಪ್ರಮುಖರಿಂದ ಪ್ರತ್ಯೇಕ ವರದಿ ಸಂಗ್ರಹಕ್ಕೂ ಪಕ್ಷ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

See also  ಹಿಜಾಬ್ ವಿವಾದ ​: ​ಸಮವಸ್ತ್ರ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು