News Kannada
Wednesday, October 04 2023
ಬೆಂಗಳೂರು ನಗರ

ಬೆಂಗಳೂರು: ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

Cabinet approves Belur Arasikere taluk drinking water project at cabinet meeting: Bommai
Photo Credit : News Kannada

ಬೆಂಗಳೂರು: ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ಸೋಮವಾರ (ಮಾ.27) ನಡೆದ‌ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ‌ ಕಿಟ್ ವಿತರಿಸಿ ಅವರು ಮಾತನಾಡಿದರು.

ಪತ್ರಕರ್ತರು ಮಾಹಿತಿ ಸಂಗ್ರಹದ ಜತೆಗೆ ವಿಚಾರಸಂಗ್ರಹವನ್ನೂ ಹೆಚ್ಚಿಸಿಕೊಂಡು ಜನೋಪಯೋಗಿ ಮಾಹಿತಿಯನ್ನು ನೀಡಬೇಕು. ಇದನ್ನು ಬಳಸಿಕೊಂಡು ಇನ್ನಷ್ಟು ‌ಪರಿಣಾಮಕಾರಿ‌ ಕೆಲಸ ಸಮಾಜ ಹಾಗೂ ವ್ಯವಸ್ಥೆಯ ಅಂಕುಡೊಂಕು ತಿದ್ದುವ ಕೆಲಸವನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಹಿಂದುಳಿದ ವರ್ಗಗಳ ಪತ್ರಕರ್ತರ ವೃತ್ತಿಗೆ ಸಹಕಾರಿಯಾಗುವಂತಹ ಕ್ಯಾಮೆರಾ, ಲ್ಯಾಪ್‌ಟಾಪ್ ಮತ್ತಿತರ ಗುಣಮಟ್ಟದ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ. ರಾಜ್ಯ ಎಲ್ಲ ಜಿಲ್ಲೆಗಳ ಒಟ್ಟು 605 ಜನರಿಗೆ ಅಗತ್ಯ ಸಲಕರಣೆಯನ್ನು ನೀಡಲಾಗುತ್ತಿದೆ.

ಹಿಂದೆ ಯಾವುದೇ ಸರಕಾರ ಈ ರೀತಿಯ ಮಾಧ್ಯಮ ಕಿಟ್ ನೀಡಿರಲಿಲ್ಲ. ಈ ಸಲಕರಣೆಗಳನ್ನು ಬಳಸಿಕೊಂಡು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಕೇಂದ್ರ ಸರಕಾರದ ಮಾಜಿ ಸಚಿವರಾದ ಡಿ.ವಿ.ಸದಾನಂದಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಜಂಟಿ ನಿರ್ದೇಶಕರಾದ ಡಿ..ಪಿ.ಮುರಳೀಧರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

ಆಯವ್ಯಯದಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳ ‌ಪತ್ರಕರ್ತರಿಗೆ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಮಾಧ್ಯಮ ಕಿಟ್ ವಿತರಿಸಿದರು.

See also  ಸರೋದ್ ವಾದಕ ರಾಜೀವ್ ತಾರಾನಾಥ್ ಗೆ ನಾಡೋಜ ಗೌರವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು