ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ (ಮೇ 21) ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಈ ಮಧ್ಯೆ ನಟ, ರಾಜಕಾರಣಿ ಜಗ್ಗೇಶ್ ಅವರ ಒಡೆತನದ ಐಷಾರಾಮಿ ಕಾರು ಮಳೆಗೆ ಮುಳುಗಿ ಹೋಗಿದೆ. ಸದ್ಯ, ಕಾರು ಮುಳುಗಿದ ಸ್ಥಳದಲ್ಲಿಂದ ನೀರನ್ನು ಹೊರತೆಗೆಯುವ ಕೆಲಸ ಆಗುತ್ತಿದೆ. ಈ ಬಗ್ಗೆ ಅವರು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.
ನನ್ನ ಮನೆಯ ರಿಪೇರಿ ಕಾರ್ಯದ ಪ್ರಯುಕ್ತ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ನಲ್ಲಿ ನನ್ನ ಬಿಎಂಡಬ್ಲ್ಯೂ 5 ಕಾರು ನಿಲ್ಲಿಸಿದ್ದೆ. ಅಕಾಲಿಕ ಮಳೆಯಿಂದ ನೀರಿನಲ್ಲಿ ಮುಳುಗಡೆ ಆಯಿತು. 5 ಎಚ್ಪಿ ಮೋಟರ್ ಬಳಸಿ ನೀರು ಹೊರಹಾಕಿಸಲಾಯಿತು. ಇಂಥ ಆಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ’ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಮುಳುಗಿದ ಕಾರಿನ ಫೋಟೋ ಕೂಡ ಹಾಕಿದ್ದಾರೆ.
ಮಹಾಮಳೆಗೆ ಮುಳುಗಿದ ನಟ ಜಗ್ಗೇಶ್ ಐಷಾರಾಮಿ ಕಾರು, ಈ ಕುರಿತು ನಟ ಹೇಳಿದ್ದೇನು ಗೊತ್ತಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.