ಬೆಂಗಳೂರು: ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಘೋಷಿಸಿದ ಬೆನ್ನಲ್ಲಿಯೇ ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್ ದರ ಜೂನ್ 1ರಿಂದಲೇ ಜಾರಿ ಆಗಲಿದೆ.
ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್ಸಿ ಜಾರಿಮಾಡಿದೆ.
ಬೆಂಗಳೂರು: ವಿದ್ಯುತ್ ಬೆಲೆ ಏರಿಕೆ ಬಿಸಿ: ಪ್ರತಿ ಯೂನಿಟ್ ಗೆ 70 ಪೈಸೆ ಹೆಚ್ಚಳ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.