ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಕಾಂಗ್ರೆಸ್ ಘೋಷಿಸಿದೆ. ಈ ನಡುವೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯ ಮಾತುಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಅಲ್ಲದೆ ಕೆಲವರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಹಲವು ಪ್ರಕರಣಗಳು ನಡೆದಿವೆ. ಈ ಬಗ್ಗೆ ಸಿದ್ದರಾಮಯ್ಯ ಒಂದೇ ಮಾತಿನಲ್ಲಿ ಖಡಕ್ ಆಗಿ ಹೇಳಿದ್ದಾರೆ. ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡುತ್ತಿದ್ದವರಿಗೆ ಪರೋಕ್ಷವಾಗಿ ತಿವಿದಿದ್ದಾರೆ.
ಗ್ಯಾರಂಟಿಗಳನ್ನು ಈಡೇರಿಸಲು ಬದ್ಧ, ಟೀಕೆಗಳಿಗೆ ಸಿದ್ದರಾಮಯ್ಯ ಸ್ಪಷ್ಟನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.