News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ: ಕುಮಾರಸ್ವಾಮಿ

Mysuru: Pancharatna Rathyatra concludes with a grand closing ceremony
Photo Credit : News Kannada

ಬೆಂಗಳೂರು: ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಅಲ್ಲದೆ, ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅದೇ ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಗಿದ್ದಾಗ ಕಾಂಗ್ರೆಸ್ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಸಂಸತ್ ಭವನ ಉದ್ಘಾಟನೆಗೆ 21 ಪಕ್ಷಗಳು ಬಹಿಷ್ಕಾರ ಹಾಕಿವೆ. ಅದು ಆಯಾ ಪಕ್ಷದ ನಿಲುವು. ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ. ದೇಶದ ಜನರ ತೆರಿಗೆ ಹಣದಿಂದ ಕಟ್ಟಿರುವ ಭವನ ಅದು. ರಾಷ್ಟ್ರಪತಿ ಗಳಿಂದ ಉದ್ಘಾಟನೆ ಆಗಬೇಕಿತ್ತು ಅನ್ನುವ ವಿಚಾರ ತೆಗೆದು ಕಾಂಗ್ರೆಸ್ ಬಹಿಷ್ಕಾರ ಮಾಡಲು ಮುಂದಾಗಿದೆ. ಇದೇ ಕಾಂಗ್ರೆಸ್ ಪಕ್ಷ ಛತ್ತೀಸಗಢದಲ್ಲಿ ವಿಧಾನಸಭಾ ಕಟ್ಟಡದ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಂದ ಅಡಿಗಲ್ಲು ಹಾಕಿಸಿತ್ತು. ಅಲ್ಲಿ ರಾಷ್ಟ್ರಪತಿ ಅವರು ನೆನಪಿಗೆ ಬರಲಿಲ್ಲವೇ? ಎಂದು ಅವರು ಕೇಳಿದರು.

ಕರ್ನಾಟಕದಲ್ಲಿ ವಿಕಾಸಸೌಧ ಉದ್ಘಾಟನೆ ಮಾಡಲು ರಾಷ್ಟ್ರಪತಿಗಳನ್ನು ಕರೆದಿದ್ದಾರಾ ಕಾಂಗ್ರೆಸ್ ನಾಯಕರು? ಅಂದು ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರೇ ವಿಕಾಸಸೌಧವನ್ನು ಉದ್ಘಾಟನೆ ಮಾಡಲಿಲ್ಲವೇ? ಈಗ ನೋಡಿದರೆ ಆದಿವಾಸಿ ಮಹಿಳೆಯನ್ನು ಕಡೆಗಣಿಸಿದ್ದಾರೆ ಅಂತಾ ನಾಟಕ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.

ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಕಳಿಸಿದ್ದಾರೆ. ಹಾಗಾಗಿ ದೇವೇಗೌಡರು ಈ ಕಾರ್ಯಕ್ರಮಕ್ಕೆ ಹೋಗುಟ್ಟಿದ್ದಾರೆ. ಇದರಿಂದ ಬಿಜೆಪಿ ಬಗ್ಗೆ ಜೆಡಿಎಸ್ ಮೃದುಧೋರಣೆ ಅಂತಾ ತಿಳಿಯುವ ಅಗತ್ಯ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು