ಬೆಂಗಳೂರು: ಮಾಲ್ಗಳಲ್ಲಿ ಖರೀದಿಗೆ ಬಳಸಬಹುದಾದ 5,000 ರೂ ವಿಶೇಷ ಕಾರ್ಡ್ಗಳನ್ನು ಅಕ್ರಮವಾಗಿ ವಿತರಿಸುವ ಮೂಲಕ ಕರ್ನಾಟಕದಲ್ಲಿ ಚುನಾವಣೆ ಗೆದ್ದಿದೆ ಎಂಬ ಎಚ್.ಡಿ ಕುಮಾರಸ್ವಾಮಿ ಆರೋಪದ ಬಗ್ಗೆ ಕರ್ನಾಟಕ ಕಾಂಗ್ರೆಸ್ ಮೌನವಾಗಿದೆ.
45 ರಿಂದ 50 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇಂತಹ ಕಾರ್ಡ್ ವಿತರಿಸಿ ಚುನಾವಣೆ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ದಾಖಲೆಗಳಾಗಿ ಕಾರ್ಡ್ಗಳನ್ನು ಪ್ರದರ್ಶನ ಮಾಡಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದೆ.
ಚುನಾವಣೆಗೆ ಕೆಲವು ಗಂಟೆಗಳ ಮೊದಲು ಯೋಜಿತ ರೀತಿಯಲ್ಲಿ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದರು . ಕಾರ್ಡ್ಗಳು ಕ್ಯೂಆರ್ ಕೋಡ್ಗಳನ್ನು ಹೊಂದಿದ್ದು, ಇದು ಗಂಭೀರ ಚುನಾವಣಾ ಅಕ್ರಮವಾಗಿದೆ. ರಾಮನಗರ ಕ್ಷೇತ್ರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಇದೇ ಕಾರಣ ಎಂದು ಹೇಳಿದ್ದರು.
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಮಾತ್ರ ಎನ್ ಕ್ಯಾಶ್ ಆಗುವ ರೀತಿಯಲ್ಲಿ ಕಾರ್ಡ್ ಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ. ಇದೊಂದು ದೊಡ್ಡ ಹಗರಣ. ಎಲ್ಲಾ 45 ರಿಂದ 50 ವಿಧಾನಸಭಾ ಸ್ಥಾನಗಳಲ್ಲಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 60,000 ಇಂತಹ ಕೂಪನ್ಗಳನ್ನು ವಿತರಿಸಲಾಗಿದೆ ಎಂದು ಅವರು ಹೇಳಿದ್ದರು.