News Karnataka Kannada
Friday, April 19 2024
Cricket
ಬೆಂಗಳೂರು ನಗರ

ಕೂಪನ್‌ ಕಾರ್ಡ್‌ ವಿತರಿಸಿ ಚುನಾವಣೆ ಗೆಲುವು: ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್‌ ದಿವ್ಯ ಮೌನ

Why controversy erupts over uniforms of MPs: Here's what's in Congress' tweet
Photo Credit : Wikimedia

ಬೆಂಗಳೂರು: ಮಾಲ್‌ಗಳಲ್ಲಿ ಖರೀದಿಗೆ ಬಳಸಬಹುದಾದ 5,000 ರೂ ವಿಶೇಷ ಕಾರ್ಡ್‌ಗಳನ್ನು ಅಕ್ರಮವಾಗಿ ವಿತರಿಸುವ ಮೂಲಕ ಕರ್ನಾಟಕದಲ್ಲಿ ಚುನಾವಣೆ ಗೆದ್ದಿದೆ ಎಂಬ ಎಚ್‌.ಡಿ ಕುಮಾರಸ್ವಾಮಿ ಆರೋಪದ ಬಗ್ಗೆ ಕರ್ನಾಟಕ ಕಾಂಗ್ರೆಸ್ ಮೌನವಾಗಿದೆ.

45 ರಿಂದ 50 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇಂತಹ ಕಾರ್ಡ್‌ ವಿತರಿಸಿ ಚುನಾವಣೆ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ದಾಖಲೆಗಳಾಗಿ ಕಾರ್ಡ್‌ಗಳನ್ನು ಪ್ರದರ್ಶನ ಮಾಡಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್‌ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದೆ.

ಚುನಾವಣೆಗೆ ಕೆಲವು ಗಂಟೆಗಳ ಮೊದಲು ಯೋಜಿತ ರೀತಿಯಲ್ಲಿ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದರು . ಕಾರ್ಡ್‌ಗಳು ಕ್ಯೂಆರ್ ಕೋಡ್‌ಗಳನ್ನು ಹೊಂದಿದ್ದು, ಇದು ಗಂಭೀರ ಚುನಾವಣಾ ಅಕ್ರಮವಾಗಿದೆ. ರಾಮನಗರ ಕ್ಷೇತ್ರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಇದೇ ಕಾರಣ ಎಂದು ಹೇಳಿದ್ದರು.

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಮಾತ್ರ ಎನ್ ಕ್ಯಾಶ್ ಆಗುವ ರೀತಿಯಲ್ಲಿ ಕಾರ್ಡ್ ಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ. ಇದೊಂದು ದೊಡ್ಡ ಹಗರಣ. ಎಲ್ಲಾ 45 ರಿಂದ 50 ವಿಧಾನಸಭಾ ಸ್ಥಾನಗಳಲ್ಲಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 60,000 ಇಂತಹ ಕೂಪನ್‌ಗಳನ್ನು ವಿತರಿಸಲಾಗಿದೆ ಎಂದು ಅವರು ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು