News Kannada
Tuesday, June 06 2023
ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್‌ ಯಶಸ್ಸಿನ ಪಂಚ ಪಾಂಡವರು ಯಾರು ಗೊತ್ತೆ…!

Vijayapura: Three sitting MLAs confirmed of hand tickets, rest uncertain
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು ರಾಜ್ಯದಲ್ಲಿ ಪಕ್ಷದ ಯಶಸ್ವಿ ಪ್ರಚಾರದ ಹಿಂದೆ ಪಕ್ಷದ ಮುಖಂಡರಾದ ಜಿ.ಪರಮೇಶ್ವರ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಂ.ಬಿ. ಪಾಟೀಲ್, ಶಶಿಕಾಂತ್ ಸೇಥಿಲ್ ಮತ್ತು ಸುನೀಲ್ ಕಾನುಗೋಲು ಪ್ರಮುಖ ಪಾತ್ರ ವಹಿಸಿದ್ದರು.

ಸುರ್ಜೆವಾಲಾ: 2020ರಲ್ಲಿ ಕೆ.ಸಿ. ವೇಣುಗೋಪಾಲ್ ಪಕ್ಷದ ರಾಜ್ಯ ಸಂಘಟನಾ ಜವಾಬ್ದಾರಿ ಹೊತ್ತಿದ್ದ ಅವಧಿಯಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ನಡುವೆ ಭಿನ್ನಾಭಿಪ್ರಾಯಗಳು ಉತ್ತುಂಗಕ್ಕೇರಿತು. ಈ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಚುನಾವಣೆಗೆ ಮುಂಚಿತವಾಗಿಯೇ ಸುರ್ಜೆವಾಲಾ ತಣ್ಣಗೆ ಮಾಡಿದರು. ಕಳೆದ ವರ್ಷ ರಾಜ್ಯದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಇಬ್ಬರು ನಾಯಕರು ಒಟ್ಟಿಗೆ ಹೆಜ್ಜೆ ಹಾಕುವಂತೆ ಮಾಡಿದರು. ಸುರ್ಜೇವಾಲಾ ಅವರು ಚುನಾವಣಾ ಪೂರ್ವದಲ್ಲಿ ಪಕ್ಷದ ನಾಯಕತ್ವದಲ್ಲಿ ಒಗ್ಗಟ್ಟಿನ ಸಂದೇಶವನ್ನು ನೀಡುವಲ್ಲಿ ಯಶಸ್ವಿಯಾದರು.

ಎಂ.ಬಿ. ಪಾಟೀಲ್: ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ಪ್ರಬಲ ಲಿಂಗಾಯತ ನಾಯಕ ಪಾಟೀಲ್ ಅವರು ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಉತ್ಸಾಹಭರಿತ ಪ್ರಚಾರ ನಡೆಸಿದ್ದಾರೆ. ಲಿಂಗಾಯತ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಕರೆತರುವಲ್ಲಿ ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಗಳು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳ ಮೂಲಕ ರಾಜ್ಯದಲ್ಲಿ ಆಕ್ರಮಣಕಾರಿ ಪ್ರಚಾರವನ್ನು ರೂಪಿಸುವ ಹಿಂದೆ ಪಾಟೀಲ್‌ ಶ್ರಮವಿದೆ. ಪಾಟೀಲರ ಪ್ರಯತ್ನದಿಂದಾಗಿಯೇ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಲ್ಕು ವರ್ಷಗಳ ನಂತರ ಚುನಾವಣಾ ಸಾರ್ವಜನಿಕ ಸಭೆ ನಡೆಸಿದರು.

ಜಿ.ಪರಮೇಶ್ವರ್: ಅವರನ್ನು ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಯಿತು. ಪಿಎಫ್‌ಐ ಮತ್ತು ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸುವ ಕುರಿತು ಮಾತನಾಡಿದ ಕಾಂಗ್ರೆಸ್‌ನ ಪ್ರಣಾಳಿಕೆಯು ಶೀಘ್ರದಲ್ಲೇ ಜನರ ಗಮನವನ್ನು ಸೆಳೆಯಿತು.  ಕಾಂಗ್ರೆಸ್‌ನ  ಮಾಜಿ ರಾಜ್ಯ ಘಟಕದ ಮುಖ್ಯಸ್ಥ ಪರಮೇಶ್ವರ್ ಅವರು ರಾಜ್ಯದ ಜನರಿಗೆ ಪಕ್ಷದ ಐದು ಭರವಸೆಗಳನ್ನು ಪ್ರಸ್ತಾಪಿಸಿದರು, ಅದು ಜನರ ಮನಸ್ಸು ಸೆಳೆದಿದ್ದು, ಸುಳ್ಳಲ್ಲ.

ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ: ಕರಾವಳಿ ಪ್ರದೇಶದಂತೆ ರಾಜ್ಯದ ವಿವಿಧ ಪ್ರದೇಶಗಳಿಗೆ ಪ್ರಣಾಳಿಕೆಯನ್ನು ತಂದರು, ಅಲ್ಲಿ ಪಕ್ಷವು ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಲ್ಲಿದೆ.

ಶಶಿಕಾಂತ್ ಸೆಂಥಿಲ್: 2008 ರ ಬ್ಯಾಚ್ ಐಎಎಸ್ ಅಧಿಕಾರಿ, 2019 ರಲ್ಲಿ ಸಿಎಎಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಸೆಂಥಿಲ್ ಅವರನ್ನು ಚುನಾವಣೆಗೆ ಬಳಸಿಕೊಂಡಿದ್ದು ರಾಜ್ಯದಲ್ಲಿ ಕಾಂಗ್ರೆಸ್ ವಾರ್ ರೂಮ್‌ನ ಉಸ್ತುವಾರಿ ಮಾಡಲಾಯಿತು. ಅವರು ತಂಡಸ್ಪೂರ್ತಿಯೊಂದಿಗೆ ಕೆಲಸ ಮಾಡಿದ್ದು, ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಸಮರ್ಥವಾಯಿತು. ಸೆಂಥಿಲ್ ನೇತೃತ್ವದಲ್ಲಿ ಕಾಂಗ್ರೆಸ್ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಪ್ರಚಾರದ ಮೇಲೆ ನಿಗಾ ಇರಿಸಲಾಗಿತ್ತು,

See also  ಕಾರವಾರ: ಬೂದು ನೀರು ನಿರ್ವಹಣೆಗೆ ಸಂಸ್ಕರಣೆಗೆ ಯೋಜನೆ

ಸುನೀಲ್ ಕೊಣುಗೋಲು: ಸುನೀಲ್‌ ಕಾನುಗೋಲು ಸಮೀಕ್ಷೆ, ಪ್ರಚಾರ, ಅಭ್ಯರ್ಥಿಗಳ ಆಯ್ಕೆ ನಿರ್ಧಾರ, ಗೆಲುವಿನ ತಂತ್ರಗಾರಿಕೆಯ ಹೊಣೆ ಹೊತ್ತಿದ್ದರು. ಬಹುತೇಕ ತೆರೆಮರೆಯಲ್ಲಿಯೇ ಇರುವ ಕಾನುಗೋಳ್ ಅವರು ರಾಜ್ಯದ ಪ್ರತಿ ವಿಧಾನಸಭಾ ಸ್ಥಾನಕ್ಕೆ ರಣತಂತ್ರವನ್ನು ಸಿದ್ಧಪಡಿಸಿದ್ದಾರೆ. ಕರ್ನಾಟಕದಲ್ಲಿ ತ್ರಿಕೋನ ಸ್ಪರ್ಧೆಯಾಗದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಮೂಲೆಗುಂಪು ಮಾಡಲು ಅವರು ತಂತ್ರವನ್ನು ಸಿದ್ಧಪಡಿಸಿದ್ದರು. ಬಿಜೆಪಿ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ, ಪೇ-ಸಿಎಂ, ಮತ್ತು 40 ಪರ್ಸೆಂಟ್ ಕಮಿಷನ್ ಸರ್ಕಾರ್ ಮುಂತಾದ ಕಾಂಗ್ರೆಸ್ ಪ್ರಚಾರಗಳಿಗೆ ಕಾನುಗೋಲು ಕಾರಣ. ಈ ಹಿಂದೆ ಕಾನುಗೋಲು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೆಲಸ ಮಾಡಿದ್ದರು. ಅವರನ್ನು ಮೇ 2022 ರಲ್ಲಿ ಕಾಂಗ್ರೆಸ್ ಗೆ ತರಲಾಯಿತು.

ಅಲ್ಲದೆ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಕೊಡುಗೆ ನೀಡಿದ್ದಾರೆ. ಈ ಹಿಂದೆ ಅವರು ಉತ್ತರ ಪ್ರದೇಶದಲ್ಲಿ ಬಿಜೆಪಿಗಾಗಿ ಕೆಲಸ ಮಾಡಿದ್ದರು ಮತ್ತು 2017 ರಲ್ಲಿ ಯೋಗಿ ಆದಿತ್ಯನಾಥ್ ಅವರ ಅದ್ಭುತ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು