News Kannada
Tuesday, June 06 2023
ಬೆಂಗಳೂರು ನಗರ

ಕರ್ನಾಟದ ಸಿಎಂ ಆಗಿ ಸಿದ್ದರಾಮಯ್ಯ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಕೆ. ಸಿ ವೇಣುಗೋಪಾಲ್‌

It has been officially announced that Siddaramaiah will be the CM of Karnataka. C Venugopal
Photo Credit : Twitter

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‌ ಹಿರಿಯ ಮುಖಂಡ ಕೆ. ಸಿ ವೇಣುಗೋಪಾಲ್‌ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರ ನೀಡಿದರು.

ಕರ್ನಾಟಕ ಜನತೆ ಕಾಂಗ್ರೆಸ್‌ ಗೆ ನೀಡಿರುವ ಜನಾದೇಶಕ್ಕೆ ಹೃದಯ ತುಂಬಿದ ಧನ್ಯವಾದಗಳು. ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಕ್ಕೆ ಕಾರಣವಾಯಿತು. ಪ್ರಿಯಾಂಕಾ ಗಾಂಧಿ ಅವರ ರೋಡ್‌ ಶೋ, ಸೋನಿಯಾಗಾಂಧಿ ಅವರ ಚುನಾವಣಾ ಪ್ರಚಾರ ಪಕ್ಷ ಬಹುಮತ ಪಡೆಯುವಲ್ಲಿ ಸಹಕಾರಿ ಆಯಿತು ಎಂದು ವಿವರಿಸಿದ್ದಾರೆ.

3 ವಿಕ್ಷಕರ ನೇಮಕ ಮಾಡಿ ಪ್ರತಿ ಎಂಎಲ್‌ಎಗಳಿಂದ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಆಯ್ಕೆ ನಡೆಸಿದ್ದೇವೆ. ನಮ್ಮ ಪಕ್ಷದಲ್ಲಿ ಸರ್ವಾಧಿಕಾರ ಇಲ್ಲ. ಈ ನಿಟ್ಟಿನಲ್ಲಿ ಎಲ್ಲರ ಅಭಿಪ್ರಾಯ ಪಡೆದು ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಿಸಿದ್ದೇವೆ. ಮೇ 20ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಡಿ.ಕೆ. ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿ ಎಂದು ನಿರ್ಧರಿಸಲಾಗಿದೆ.

ಅದೇರೀತಿ ಲೋಕಸಭೆ ಚುನಾವಣೆ ವರೆಗೆ ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದರು. ಸಿಎಂ ಪ್ರಮಾಣ ವಚನ ದಿನದಂದು ಹಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವಿವರಿಸಿದರು.

See also  ಹುಬ್ಬಳ್ಳಿ: ನೀರಿನ ಆಹಾಕಾರ- ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶೆಟ್ಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು