News Kannada
Tuesday, September 26 2023
ಬೆಂಗಳೂರು ನಗರ

ಕೆ.ಆರ್.ಪೇಟೆ: ಪರಿಹಾರ ತಾರತಮ್ಯ ವಿರೋಧಿಸಿ ಬೈಪಾಸ್ ರಸ್ತೆ ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ

ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗೇಟ್ ಬಳಿ ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿಯ ಕೆ.ಆರ್.ಪೇಟೆ ಬೈಪಾಸ್ ರಸ್ತೆ ಕಾಮಗಾರಿಗೆ ಸಾರ್ವಜನಿಕರು ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
Photo Credit : By Author

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗೇಟ್ ಬಳಿ ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿಯ ಕೆ.ಆರ್.ಪೇಟೆ ಬೈಪಾಸ್ ರಸ್ತೆ ಕಾಮಗಾರಿಗೆ ಸಾರ್ವಜನಿಕರು ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಈ ವೇಳೆ ಶಾಸಕ ಮಂಜು ಮಧ್ಯಪ್ರವೇಶಿಸಿದ್ದರೆ ರಸ್ತೆ ಕಾಮಗಾರಿಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದ್ದು, ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬರಿಗೈಯಲ್ಲಿ  ಕೆಶಿಫ್ ಅಧಿಕಾರಿಗಳು ಹಾಗೂ ಪೊಲೀಸರು ಹಿಂತಿರುಗಿದ್ದಾರೆ.

ಕೆಶಿಫ್ ಇಲಾಖೆ ಯಿಂದ ರೈತರಿಗೆ ಭಾರಿ ಅನ್ಯಾಯವಾಗಿದೆ ಎಂಬ ದೂರು ಕೇಳಿಬಂದಿದ್ದು ಕೆಶಿಫ್ ನಿರ್ಮಿಸುತ್ತಿರುವ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ನೀಡಿದ ಆರಂಭದಲ್ಲಿ ರಸ್ತೆ ನಿರ್ಮಾಣಕ್ಕಾಗಿ ತಮ್ಮ ಕೃಷಿ ಹಿಡುವಳಿ ಭೂಮಿಯನ್ನು ನೊಂದಣಿ ಮಾಡಿಕೊಟ್ಟ ರೈತರಿಗೆ ಒಂದು ಗುಂಟೆ ಭೂಮಿಗೆ ಕೇವಲ 15 ರಿಂದ 20ಸಾವಿರ ಪರಿಹಾರ ನೀಡಿದ್ದಾರೆ.

ರಾಜ್ಯ ಸರ್ಕಾರದ ಕೆಶಿಫ್ ಇಲಾಖೆಯು ಭೂಮಿ ಕಳೆದುಕೊಂಡ ರೈತರಿಗೆ ಅವೈಜ್ಞಾನಿಕವಾಗಿ ಪರಿಹಾರ ನೀಡಿದೆ. ರಾಜ್ಯ ಸರ್ಕಾರವು ನೀಡುತ್ತಿರುವ ಪರಿಹಾರವು ಅವೈಜ್ಞಾನಿಕವಾಗಿದೆ ಎಂದು ಆಗ್ರಹಿಸಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತ ರೈತರಿಗೆ ನ್ಯಾಯಾಲಯವು ಒಂದು ಗುಂಟೆ ಭೂಮಿಗೆ ಒಂದೂವರೆ ಲಕ್ಷದಿಂದ ಎರಡೂವರೆ ಲಕ್ಷ ರೂವರೆಗೆ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಆದರೆ ಆದೇಶ ಪಾಲನೆಯಾಗುತ್ತಿಲ್ಲ.

ಈ ಅನ್ಯಾಯವನ್ನು ಸರಿಪಡಿಸುವಂತೆ ಕಳೆದ ಏಳೆಂಟು ತಿಂಗಳಿನಿಂದ ರೈತರು ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೂ ರೈತರ ಮೇಲೆ ದಬ್ಬಾಳಿಕೆ ನಡೆಸಿ  ಪೊಲೀಸರ ಸಹಕಾರದೊಂದಿಗೆ ರಸ್ತೆ ನಿರ್ಮಿಸಲು ಕೆಶಿಫ್ ಅಧಿಕಾರಿಗಳು ಬರುತ್ತಿದ್ದಾರೆ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ನೂರಾರು ರೈತರು ಕೆ.ಆರ್.ಪೇಟೆ ಬೈಪಾಸ್ ರಸ್ತೆಯ ಬಳಿ ಜಮಾಯಿಸಿ ರಸ್ತೆ ಕಾಮಗಾರಿ ನಡೆಸಲು ಬಂದ ಯಂತ್ರೋಪಕರಣಗಳ ಮುಂದೆ ಮಲಗಿ ಭಾರೀ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಶಿಫ್ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸರ ನೆರವಿನೊಂದಿಗೆ ರೈತರನ್ನು ಒಕ್ಕಲೆಬ್ಬಿಸಿ ರಸ್ತೆ ಕಾಮಗಾರಿಯನ್ನು ಮಾಡಲು ಯತ್ನಿಸಿದರೆ ರೈತರು ದಂಗೆ ಏಳಬೇಕಾಗುತ್ತದೆ. ಇದರಿಂದಾಗುವ ಎಲ್ಲಾ ರೀತಿಯ ಅನಾಹುತಕ್ಕೆ ಕೆಶಿಫ್ ಅಧಿಕಾರಿಗಳೇ ಹೊಣೆ ಯಾಗಬೇಕಾಗುತ್ತದೆ ಎಂದು ಭೂಮಿ ಕಳೆದುಕೊಂಡಿರುವ ರೈತರು ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಿರುವ ಕೆಶಿಫ್ ಅಧಿಕಾರಿಗಳನ್ನು ಶಾಸಕ ಹೆಚ್.ಟಿ.ಮಂಜು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಸ್ತೆ ನಿರ್ಮಾಣಕ್ಕಾಗಿ ಭೂಮಿಯನ್ನು ಕಳೆದುಕೊಂಡು ಅತ್ಯಲ್ಪ ಪರಿಹಾರ ಪಡೆದುಕೊಂಡಿರುವ ಅನ್ನಧಾತರಾದ ರೈತರಿಗೆ ಮೊದಲು ಪರಿಹಾರ ನೀಡುವಲ್ಲಿ ಆಗಿರುವ ಲೋಪವನ್ನು ಸರಿಪಡಿಸಿ. ನಂತರ ರಸ್ತೆ ನಿರ್ಮಾಣ ಮಾಡಿ ಎಂದು ಶಾಸಕ ಹೆಚ್.ಟಿ.ಮಂಜು ಖಡಕ್ ನಿರ್ದೇಶನ ನೀಡಿದರು.

ರೈತರು ಅಗತ್ಯ ದಾಖಲೆ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿ ನಂತರ ರಸ್ತೆ ಅಭಿವೃದ್ಧಿ ಕೆಲಸ ಮಾಡಿ ಎಂದು ರೈತರ ಪರವಾಗಿ ಧನಿ ಎತ್ತಿದ ಹಿನ್ನೆಲೆಯಲ್ಲಿ ಕೆಶಿಫ್ ಎಂಜಿನಿಯರುಗಳು ಹಾಗೂ ಪೋಲೀಸ್ ಸಿಬ್ಬಂದಿಗಳು ಬಂದ ದಾರಿಗೆ ಸುಂಕವಿಲ್ಲದೇ ಹಿಂದಿರುಗಿದರು.

See also  ಬಸ್-ಬೈಕ್ ಅಪಘಾತ: ಮೂವರು ದುರ್ಮರಣ, ಹೊತ್ತಿ ಉರಿದ ಬಿಎಂಟಿಸಿ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು