News Karnataka Kannada
Friday, April 19 2024
Cricket
ಬೆಂಗಳೂರು ನಗರ

ಮಲ್ಲಿಕಾರ್ಜುನ ಖರ್ಗೆ ತಾವೇನು ಹೆಬ್ಬಾವೇ ಎಂದು ಪ್ರಶ್ನಿಸಿದ್ದ ಯತ್ನಾಳ್‌ಗೆ ನೋಟಿಸ್‌

Attempts are being made to cover up PSI recruitment exam scam, says Basanagouda Patil Yatnal
Photo Credit : News Kannada

ಬೆಂಗಳೂರು: ಪಿ ಆರ್‌ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಾಗಿದೆ. ಇದೇ ಮೇ 5 ರಂದು ಮಸ್ಕಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಆರ್ ಪಿ ಆಕ್ಟ್ ಉಲ್ಲಂಘನೆ ಉಲ್ಲಂಘನೆ ಮಾಡಿದ್ದು, ಇದೀಗ ಕಾರಣ ಕೇಳಿ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಮೋದಿಗೆ ವಿಷದ ಹಾವು ಎಂದ ಮಲ್ಲಿಕಾರ್ಜುನ ಖರ್ಗೆ ತಾವೇನು ಹೆಬ್ಬಾವಾ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಅರೇಹುಚ್ಚಾ ಎಂದು ವಾಗ್ದಾಳಿ ನಡೆಸಿದ್ದರು. ಈ ಮೂಲಕ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮಸ್ಕಿ ಚುನಾವನಾಧಿಕಾರಿ 24 ಗಂಟೆಗಳಲ್ಲಿ ಸೂಕ್ತ ಸಮಜಾಯಿಷಿ ನೀಡಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ನೀಡಿದ್ದಾರೆ.

ಅಲ್ಲದೇ ತಪ್ಪಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನೋಟೀಸ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಈ ಹಿಂದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಹೇಳಿಕೆ ನೀಡಿದ್ದು, ಆ ಹೇಳಿಕೆಗೂ ಸಹ ಚುನಾವಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು