ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ತಮ್ಮ ಯುವ ಜನತಾದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಹೀನಾಯ ಸೋಲು ಕಂಡಿದ್ದರು.
ಇಲ್ಲಿ ನಿಖಿಲ್ಗೆ ತೀವ್ರ ಸ್ಪರ್ಧೆ ಒಡ್ಡಿದ್ದ ಕಾಂಗ್ರೆಸ್ನ ಇಕ್ಬಾಲ್ ಹುಸೇನ್ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿ, ತಮ್ಮ ರಾಜೀನಾಮೆಯನ್ನು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಸಲ್ಲಿಸಿದ್ದು ಪಕ್ಷದ ಜತೆ ಸದಾ ನಿಲ್ಲಲಿದ್ದು ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.
ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟಲು ಸಹಕಾರ ನೀಡಲಾಗುವುದು ಎಂದು ತಮ್ಮ ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದು ಪಕ್ಷ ಮರು ನಿರ್ಮಾಣಮಾಡುವ ದಿಸೆಯಲ್ಲಿ ಈ ಹೆಜ್ಜೆಯನ್ನು ಇಟ್ಟಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.