ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ವಿವಿಧ ಪ್ರದೇಶಗಳಲ್ಲಿ ಪ್ರಚಾರ ಕೈಗೊಳ್ಳುತ್ತಿದ್ದು, ಆ ವಿವರ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು, ಬಾದಾಮಿ, ಹಾವೇರಿಯಲ್ಲಿ ವಿವಿಧ ಸಭೆ, ರ್ಯಾಲಿಗಳಲ್ಲಿ ಪಾಲ್ಗೊಳ್ಳುವರು. ಅದೇರೀತಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಸವದತ್ತಿ, ಅಥಣಿ, ರಾಯಬಾಗ್, ಚಿಕ್ಕೋಡಿ, ಯಮಕನಮರಡಿಯಲ್ಲಿ ಪ್ರಚಾರ ನಡೆಸುವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮದ್ದೂರು, ಚಿಂತಾಮಣಿ, ಬಾಗೇಪಲ್ಲಿಯಲ್ಲಿ ಪ್ರಚಾರ ನಡೆಸುವರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್: ಶೃಂಗೇರಿ, ಪುತ್ತೂರು, ಕಾರ್ಕಳ, ಭಟ್ಕಳ, ಬಂಟ್ವಾಳದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುವರು.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಸರ್ಮ ವಿರಾಜಪೇಟೆ, ಮಡಿಕೇರಿ, ಬೆಳ್ತಂಗಡಿಯಲ್ಲಿ ಸಭೆ, ಪ್ರಚಾರ ನಡೆಸುವರು. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮ್ನಾಬಾದ್ ನಲ್ಲಿ ಪ್ರಚಾರ ಕಾರ್ಯ ನಡೆಸುವರು. ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್: ಹಗರಿಬೊಮ್ಮನಹಳ್ಳಿ, ಗಂಗಾವತಿಯಲ್ಲಿ ಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.