News Karnataka Kannada
Friday, April 19 2024
Cricket
ಬೆಂಗಳೂರು ನಗರ

ಬಾಡಿಗೆದಾರರಿಗೂ ಸಿಗಲಿದೆ ಗೃಹಜ್ಯೋತಿ ಬೆಳಕು: ಅದಕ್ಕಾಗಿ ಮಾಡಬೇಕಾಗಿರೋದು ಇಷ್ಟೇ…

The tenants will also get the light of the house: That's all that needs to be done...
Photo Credit : News Kannada

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗಲಿದೆ ಎಂದು ಹೇಳಿದ್ದರು. ಆದರೆ ಸೋಮವಾರ ಬಿಡುಗಡೆಯಾದ ಮಾರ್ಗಸೂಚಿಯಲ್ಲಿ ‘ಒಬ್ಬರ ಹೆಸರಿನಲ್ಲಿ ಎಷ್ಟೇ ಆರ್ ಆರ್ ಸಂಖ್ಯೆಗಳಿದ್ದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯವಾಗಲಿದೆ’ ಎಂದು ನಮೂದಿಸಲಾಗಿತ್ತು. ಹೀಗಾಗಿ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಸಿಗುವ ಬಗ್ಗೆ ಗೊಂದಲ ಉಂಟಾಗಿತ್ತು.

ಇದೀಗ ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿ ಗೊಂದಲ ನಿವಾರಿಸುವ ಕೆಲಸ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದಿದ್ದಾರೆ.

1 ವಾಸವಿರುವ ಮನೆಯ ಆರ್ ಆರ್ ಸಂಖ್ಯೆಯೊಂದಿಗೆ ತಮ್ಮ ಆಧಾರ್ ಲಿಂಕ್ ಮಾಡಬೇಕು.

2 ಇದಕ್ಕೆ ಬಾಡಿಗೆ ಮನೆಯ ಕರಾರು ಪತ್ರ (Contract letter) ವನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.

3 ಒಂದು ದಾಖಲೆಯನ್ನು ಒಂದು ಮೀಟರ್ ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ.

4 ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್ ನೊಂದಿಗಿನ ಲಿಂಕ್ ತೆಗೆಯಬೇಕು.

5 ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್ ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು.

ಸ್ವಂತ ಮನೆಯವರು ಈ ರೀತಿ ಮಾಡಬೇಕು

1 ಆರ್ ಆರ್ ನಂಬರ್ ನೊಂದಿಗೆ ಆಧಾರ್ ಲಿಂಕ್ ಮಾಡಬೇಕು.

2 ಒಂದಕ್ಕಿಂತ ಹೆಚ್ಚು ಮನೆಯಿದ್ದರೆ ಒಂದು ಮನೆಗೆ ಮಾತ್ರ ಅವಕಾಶ.

3 ಎರಡು ಮೀಟರ್ ಹೊಂದಿದ್ದರೆ ಯಾವುದಾದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು