ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ರದ್ದುಪಡಿಸುವ ಮೂಲಕ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಹೊಸ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ರಾಜ್ಯದಲ್ಲಿ ಎನ್ಇಪಿಯನ್ನು ಕಾಂಗ್ರೆಸ್ ಜಾರಿ ಬದಲಾಗಿ ಸರಕಾರ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಿದೆ ಎಂದು ತಿಳಿಸಿದ್ದಾರೆ.
ಶಿವಕುಮಾರ್ ಅವರು ಎನ್ಇಪಿಯನ್ನು ನಾಗ್ಪುರ ಶಿಕ್ಷಣ ನೀತಿ ಎಂದು ನಾಗ್ಪುರ ನಗರದ ಆರ್ಎಸ್ಎಸ್ ಕೇಂದ್ರ ಕಚೇರಿ ಹೆಸರನ್ನು ಉಲ್ಲೇಖಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಶಿವಕುಮಾರ್ ಎನ್ಇಪಿ ಕುರಿತು ವಿಸ್ತೃತ ಚರ್ಚೆಯಾಗಬೇಕಿತ್ತು. ಅದು ನಡೆದಿಲ್ಲ, ನಾನೂ ಕೂಡ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ ಅಲ್ಲದೆ ವಿವಿಧ ಸಂಸ್ಥೆಗಳಲ್ಲಿ ಟ್ರಸ್ಟಿ, ಅಧ್ಯಕ್ಷ ಹುದ್ದೆಯಲ್ಲಿದ್ದೇನೆ. ನನಗೇ ಎನ್ಇಪಿ ಮೂಲ ಅರ್ಥವಾಗುತ್ತಿಲ್ಲ. ಈ ಸಂಬಂಧ ಎರಡು ಅಥವಾ ಮೂರು ಬಾರಿ ಅಧ್ಯಯನ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ, ಆದರೆ ಸಾಧ್ಯವಾಗಿಲ್ಲ ಎಂದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿದರೂ ಎನ್ಇಪಿಯ ಸಾರವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ ಎಂದು ಶಿವಕುಮಾರ್ ಸಮರ್ಥಿಸಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಎನ್ಇಪಿಯನ್ನು ಹಿಂಪಡೆಯಲು ಒತ್ತಾಯಿಸಿದ್ದರು. ವಿದ್ಯಾರ್ಥಿಗಳಿಗೆ ಕೋಮುವಾದ ವಿಷಯಗಳನ್ನು ಕಲಿಸುವುದು ಎನ್ಇಪಿಯ ಉದ್ದೇಶವಾಗಿದೆ ಎಂದು ಶಿವಕುಮಾರ್ ಆರೋಪಿಸಿದರು.