News Kannada
Saturday, September 23 2023
ಬೆಂಗಳೂರು ನಗರ

ನಾಗ್ಪುರ ಶಿಕ್ಷಣ ನೀತಿ ನಮಗೆ ಬೇಡ, ಹೊಸ ಶಿಕ್ಷಣ ನೀತಿ ಜಾರಿಗೆ ಸಿದ್ಧ: ಶಿವಕುಮಾರ್‌

Cauvery water sharing: Dy CM says he doesn't want to do politics
Photo Credit : Twitter

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಪಡಿಸುವ ಮೂಲಕ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಹೊಸ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ರಾಜ್ಯದಲ್ಲಿ ಎನ್‌ಇಪಿಯನ್ನು ಕಾಂಗ್ರೆಸ್ ಜಾರಿ ಬದಲಾಗಿ ಸರಕಾರ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಿದೆ ಎಂದು ತಿಳಿಸಿದ್ದಾರೆ.

ಶಿವಕುಮಾರ್ ಅವರು ಎನ್‌ಇಪಿಯನ್ನು ನಾಗ್ಪುರ ಶಿಕ್ಷಣ ನೀತಿ ಎಂದು ನಾಗ್ಪುರ ನಗರದ ಆರ್‌ಎಸ್‌ಎಸ್ ಕೇಂದ್ರ ಕಚೇರಿ ಹೆಸರನ್ನು ಉಲ್ಲೇಖಿಸಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಶಿವಕುಮಾರ್‌ ಎನ್‌ಇಪಿ ಕುರಿತು ವಿಸ್ತೃತ ಚರ್ಚೆಯಾಗಬೇಕಿತ್ತು. ಅದು ನಡೆದಿಲ್ಲ, ನಾನೂ ಕೂಡ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ ಅಲ್ಲದೆ ವಿವಿಧ ಸಂಸ್ಥೆಗಳಲ್ಲಿ ಟ್ರಸ್ಟಿ, ಅಧ್ಯಕ್ಷ ಹುದ್ದೆಯಲ್ಲಿದ್ದೇನೆ. ನನಗೇ ಎನ್‌ಇಪಿ ಮೂಲ ಅರ್ಥವಾಗುತ್ತಿಲ್ಲ. ಈ ಸಂಬಂಧ ಎರಡು ಅಥವಾ ಮೂರು ಬಾರಿ ಅಧ್ಯಯನ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ, ಆದರೆ ಸಾಧ್ಯವಾಗಿಲ್ಲ ಎಂದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿದರೂ ಎನ್‌ಇಪಿಯ ಸಾರವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ ಎಂದು ಶಿವಕುಮಾರ್ ಸಮರ್ಥಿಸಿಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಎನ್‌ಇಪಿಯನ್ನು ಹಿಂಪಡೆಯಲು ಒತ್ತಾಯಿಸಿದ್ದರು. ವಿದ್ಯಾರ್ಥಿಗಳಿಗೆ ಕೋಮುವಾದ ವಿಷಯಗಳನ್ನು ಕಲಿಸುವುದು ಎನ್‌ಇಪಿಯ ಉದ್ದೇಶವಾಗಿದೆ ಎಂದು ಶಿವಕುಮಾರ್‌ ಆರೋಪಿಸಿದರು.

See also  ಆಕ್ಸಿಜನ್ ಸಿಗದೇ ವೆಂಟಿಲೇಟರ್‌ನಲ್ಲಿದ್ದ ಸಚಿವ ಸುರೇಶ್ ಕುಮಾರ್ ಆಪ್ತ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು