News Karnataka Kannada
Friday, March 29 2024
Cricket
ಬೆಂಗಳೂರು ನಗರ

ಬಿಜೆಪಿ ಸರ್ಕಾರದ ಎಲ್ಲ ಹಗರಣಗಳ ತನಿಖೆ ಮಾಡೇ ಮಾಡ್ತೀವಿ: ಸಚಿವ ಎಂ.ಬಿ. ಪಾಟೀಲ್‌

BJP Rath Yatra: Ex-Minister M. B. Patil suggests BJP to carry picture of Channamma, Rayanna instead of Savarkar
Photo Credit : News Kannada

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಅವಧಿ ಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ತನಿಖೆ ಮಾಡಲಾಗುವುದು ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಹೇಳಿದರು.

ನಗರದ ಗವಿಮಠಕ್ಕೆ ಭೇಟಿ ನೀಡಿ ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣ ಪೂರ್ವದಲ್ಲಿ ನಾವು ಹೇಳಿದಂತೆ ಬಿಜೆಪಿಯ 40 ಪರ್ಸೆಂಟ್‌ ಹಗರಣ, ಕೋವಿಡ್‌ ವೇಳೆ ಹಗರಣ ಹಾಗೂ ಪಿಎಸ್‌ಐ ಹಗರಣವನ್ನು ನಿಶ್ಚಿತವಾಗಿ ತನಿಖೆ ಮಾಡುತ್ತೇವೆ. ಪ್ರಸ್ತುತ ಗ್ಯಾರಂಟಿ ಯೋಜನೆಗಳ ಬಗ್ಗೆ ಒತ್ತು ನೀಡಿದ್ದೇವೆ. ಇನ್ನೂ ಸಮಯವಿದೆ. ಅವರ ಎಲ್ಲ ಹಗರಣ ತನಿಖೆ ಮಾಡಲಿದ್ದೇವೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರಿಗೆ ಪ್ರಹ್ಲಾದ ಜೋಶಿ ವಿರುದ್ಧ ಎಂಪಿ ಟಿಕೆಟ್‌ ನೀಡುವ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಶೆಟ್ಟರ್‌ ಸೇರಿದಂತೆ ಸವದಿ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನ ಕೊಟ್ಟೇ ಕೊಡುತ್ತದೆ. ಅದರಲ್ಲಿ ಎರಡು ಮಾತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಜಾರಿ ಮಾಡಲಿದ್ದೇವೆ. ವಾರ್ಷಿಕ ವಿದ್ಯುತ್‌ ಬಳಕೆ ಮಾಡುವ ಆಧಾರದಲ್ಲಿ ಅವರಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಕೊಡುತ್ತಿದ್ದೇವೆ. ಇದನ್ನು ಕೆಲವರು ಗೊಂದಲ ಮಾಡುತ್ತಿದ್ದಾರೆ. ಇದರಿಂದ ಅವರಿಗೇನೂ ಪ್ರಯೋಜನ ಆಗಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು