News Kannada
Wednesday, May 31 2023
ಬೆಂಗಳೂರು

ಬೆಂಗಳೂರು: ಭಯೋತ್ಪಾದನೆಗೆ ಬಿಜೆಪಿಯವರು ಯಾರು ಬಲಿಯಾಗಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

No one from THE BJP has fallen prey to terrorism, says Chief Minister Siddaramaiah
Photo Credit : News Kannada

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭಯೋತ್ಪಾದನೆ ಬಗ್ಗೆ ಮಾತನಾಡುತ್ತಾರೆ. ಆದರೆ ಭಯೋತ್ಪಾದನೆಯಿಂದ ಬಿಜೆಪಿಯ ಯಾರೂ ಪ್ರಾಣ ಕಳೆದುಕೊಂಡಿಲ್ಲ. ಆದರೆ ಭಯೋತ್ಪಾದನೆಗೆ ಬಲಿಯಾದವರು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಜವಾಹರಲಾಲ್ ನೆಹರೂ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದವರು. ಪ್ರಜಾಪ್ರಭುತ್ವದ ಯಶಸ್ವಿಗೆ ಜವಾಹರ್​ಲಾಲ್ ನೆಹರು ಕಾರಣ. ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಲು ಕಾಂಗ್ರೆಸ್ ಪಕ್ಷ ಕಾರಣ. ನೆಹರು ವಿಪಕ್ಷ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದಿದ್ದರು.

ಈಗಿನ ಪ್ರಧಾನಿಗೆ ನೆಹರು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು. ಭಯೋತ್ಪಾದನೆ ನಿರ್ಮೂಲನೆ ಮಾಡಬೇಕೆಂಬುದು ಕಾಂಗ್ರೆಸ್​​ನ ಆಸೆ. ಮೊದಲಿನಿಂದಲೂ ಭಯೋತ್ಪಾದನೆ ವಿರುದ್ಧ ಕಾಂಗ್ರೆಸ್ ಹೋರಾಡುತ್ತಿದೆ ಎಂದರು.

See also  ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು