ಬೆಂಗಳೂರು: ಕೋಟೆನಾಡು ಚಿತ್ರದುರ್ಗದಲ್ಲಿ ನಾಳೆ (ಮೇ 2) ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಬಳಿಕ ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಸಭೆ ನಡೆಸಲಿದ್ದಾರೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯ ಡಿಆರ್ಡಿಒ ಆವರಣದಲ್ಲಿರುವ ಏರ್ ಪೋರ್ಟ್ಗೆ 10:25ಕ್ಕೆ ಆಗಮಿಸಲಿದ್ದಾರೆ. ಬಳಿ ಡಿಆರ್ಡಿಒ ಏರ್ ಪೋರ್ಟ್ನಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.