News Kannada
Tuesday, June 06 2023
ಬೆಂಗಳೂರು

ಬೆಂಗಳೂರು: ವಾಚಿನ ವಿಚಾರಕ್ಕೆ ಮತ್ತೊಮ್ಮೆ ಸುದ್ದಿಯಾದ ಸಿದ್ದರಾಮಯ್ಯ

Siddaramaiah is once again in the news for his watch issue
Photo Credit : News Kannada

ಬೆಂಗಳೂರು: ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯ ಅವರಿಗೆ ಅವರ ಪತ್ನಿ ಪಾರ್ವತಿ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಸಂತೋಷ ಇಮ್ಮಡಿಯಾಗಿತ್ತು. ಇತ್ತ ಅವರ ಪತ್ನಿ ಪಾರ್ವತಿಯವರು ಸಿದ್ದರಾಮಯ್ಯ ಅವರಿಗೆ ಪ್ರೀತಿಯಿಂದ ಉಡುಗೊರೆಯಾಗಿ ರ್ಯಾಡೋ ವಾಚ್ ನೀಡಿದ್ದಾರೆ.

ಪಾರ್ವತಿ ಅವರು ಉಡುಗೊರೆಯಾಗಿ ನೀಡಿದ ವಾಚ್‌ ಧರಿಸಿಕೊಂಡು ಸಿದ್ದರಾಮಯ್ಯ ಅವರು ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕೆಪಿಸಿಸಿ ಕಚೇರಿಯಲ್ಲಿರುವ ಇಂಧಿರಾಗಾಂಧಿ ಸಭಾಂಗಣದಲ್ಲಿ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಅವರ ಪುಣ್ಯ ತಿಥಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೊಸ ವಾಚ್ ಕಟ್ಟಿಕೊಂಡು ಬಂದಿದ್ದರು. ಆಕರ್ಷಕವಾಗಿ ಕಾಣಿಸುತ್ತಿದ್ದ ವಾಚ್​ ನೋಡಿ ಡಿಕೆಶಿ ಪ್ರಶ್ನಿಸಿದ್ದಾರೆ. ಈ ವೇಳೆ ಸಿಎಂ ಆದ ಕಾರಣಕ್ಕೆ ಪತ್ನಿ ವಾಚ್ ಉಡುಗೊರೆಯಾಗಿ ನೀಡಿರುವುದಾಗಿ ಡಿಕೆಶಿ ಹಾಗೂ ಎಂ.ಬಿ. ಪಾಟೀಲ್ ಅವರಲ್ಲಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

See also  ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು