News Karnataka Kannada
Friday, March 29 2024
Cricket
ಬೆಂಗಳೂರು

ಬೆಂಗಳೂರು: ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ – ಸಿದ್ದರಾಮಯಯ್ಯ

A compensation of Rs 50 lakh will be given to the policemen who died in the line of duty. CM announces relief
Photo Credit : News Kannada

ಬೆಂಗಳೂರು: ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ದೊರೆತಿದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಯೋಜನೆ ರೂಪಿಸಿ ಅಧಿಕೃತವಾಗಿ ಜಾರಿಗೊಳಿಸಲಾಗುವುದು ಎಂದರು.

ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ​​ ವಿದ್ಯುತ್​ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್​ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು.

ಈ ನಡುವೆ ಉದ್ಯೋಗ ಸಿಕ್ಕರೆ ಯುವ ನಿಧಿ ನೀಡಲಾಗುವುದಿಲ್ಲ. ಡಿಪ್ಲಮಾ ಪಾಸ್ ಮಾಡಿದ ನಿರುದ್ಯೋಗಿಗಳಿ ಒಂದೂವರೆ ಸಾವಿರ ರೂ., ಎಲ್ಲಾ ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು