News Karnataka Kannada
Friday, April 26 2024
ಬೆಂಗಳೂರು

ಉಚಿತ ವಿದ್ಯುತ್‌ ಯೋಜನೆ ದುರುಪಯೋಗಕ್ಕೆ ಜನರನ್ನು ಪ್ರಚೋದಿಸುತ್ತಿರುವ ಬಿಜೆಪಿ: ಸಿಎಂ ಆರೋಪ

BJP provoking people to misuse free power scheme in K'taka: CM Siddaramaiah
Photo Credit :

ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ನೀಡುವ ಯೋಜನೆಯನ್ನು ದುರುಪಯೋಗ ಮಾಡುವಂತೆ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಪಿಸಿದ್ದಾರೆ.
ಸಂಯಮವಿಲ್ಲದೆ ವಿದ್ಯುತ್ ಬಳಸುವಂತೆ ಬಿಜೆಪಿ ಹೇಳುತ್ತಿದೆ. ಆದರೆ ನಾವು ಯೋಜನೆ ದುರುಪಯೋಗವಾಗದಂತೆ ನೋಡಿಕೊಳ್ಳುತ್ತೇವೆ ಮತ್ತು ಜನರ ಅಜಾಗರೂಕ ವಿದ್ಯುತ್ ಬಳಕೆಗೆ ಬ್ರೇಕ್ ಹಾಕುತ್ತೇವೆ ಎಂದು ಅವರು ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

”ನಮ್ಮ ಸರಕಾರ ಬಡವರು ಮತ್ತು ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಉಚಿತ ವಿದ್ಯುತ್ ಸರಬರಾಜು ಯೋಜನೆಯನ್ನು ಘೋಷಿಸಿದೆ, ಜನರು ತಮ್ಮ ಹಿಂದಿನ ವರ್ಷದ ವಿದ್ಯುತ್ ಬಳಕೆಗೆ ಶೇಕಡಾ 10 ರಷ್ಟು ಹೆಚ್ಚುವರಿಯಾಗಿ ಬಳಸಲು ನಾವು ಅವಕಾಶ ನೀಡಿದ್ದೇವೆ. ಜನರು ಈ ಯೋಜನೆಯನ್ನು ಸಂಭ್ರಮದಿಂದ ಸ್ವೀಕರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆದರೆ, ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ಪಕ್ಷವು ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳಲು ಮತ್ತು ವಿವೇಚನಾರಹಿತವಾಗಿ ವಿದ್ಯುತ್ ಬಳಕೆಗೆ ಉತ್ತೇಜನ ನೀಡುತ್ತಿದೆ. ಇದು ಜನವಿರೋಧಿಯಾಗಿದೆ. ರಾಜ್ಯದ ಪ್ರಜ್ಞಾವಂತರು ಈ ವಿಷಯದಲ್ಲಿ ಅವರನ್ನು ಪ್ರೋತ್ಸಾಹಿಸುವುದಿಲ್ಲ ಎಂಬ ವಿಶ್ವಾಸ ನಮಗಿದೆ. ಸಿದ್ದರಾಮಯ್ಯ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು