ಚಿತ್ರದುರ್ಗ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಆಲೂರು ಗ್ರಾಮದ ಬಳಿ ಟೈರ್ ಸ್ಪೋಟಗೊಂಡು ಲಾರಿ ಪಲ್ಟಿಯಾಗಿದ್ದು, ಲಾರಿ ಪಲ್ಟಿಯಾದ ಪರಿಣಾಮ ಒಂದು ಕಾರು, 6 ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟೈರ್ ಸ್ಪೋಟಗೊಂಡು ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಗದಗ ಮೂಲದ ಪ್ರಶಾಂತ್ (28), ಹನುಮಪ್ಪ (30), ರಮೇಶ್ (30), ಗುರಪ್ಪ(30) ಎಂದು ಗುರುತಿಸಲಾಗಿದೆ.