ಚಿತ್ರದುರ್ಗ: ತಮಿಳುನಾಡಿಗೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಮೃತರನ್ನು 72 ವರ್ಷದ ಕನಕಮಣಿ ಮತ್ತು 17 ವರ್ಷದ ಆಕಾಶ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಚಾಲಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಾದ ಜ್ಞಾನಶೇಖರ್ ಮತ್ತು ಮೌಳಿ ರಾಜನ್ ಅವರನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಮಲ್ಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಬಿಕಾನೇರ್ ನೋಂದಣಿ ಸಂಖ್ಯೆಯನ್ನು ಹೊಂದಿರುವ ಆಂಬ್ಯುಲೆನ್ಸ್ ಅಹಮದಾಬಾದ್ನಿಂದ ತಮಿಳುನಾಡಿನ ತಿರುನಲ್ವೇಲಿಗೆ ಮೃತದೇಹವನ್ನು ಸಾಗಿಸುತ್ತಿತ್ತು. ಅಪಘಾತದಲ್ಲಿ ಆಂಬ್ಯುಲೆನ್ಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.