News Karnataka Kannada
Thursday, March 28 2024
Cricket
ಚಿತ್ರದುರ್ಗ

ಸುಳ್ಳಿನ ಗ್ಯಾರೆಂಟಿಗಳನ್ನು ನಂಬಬೇಡಿ: ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Air show is a symbol of country's progress: PM Narendra Modi
Photo Credit : News Kannada

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲವೆಂದು ಸ್ವತಃ ಕಾಂಗ್ರೆಸ್​ ನಾಯಕರಿಗೆ ಗೊತ್ತಿದೆ. ಹೀಗಾಗಿ ಸುಳ್ಳಿನ ಗ್ಯಾರೆಂಟಿಗಳನ್ನು ನೀಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡುತ್ತವೆ. ಮೇ 10 ರಂದು ಕಮಲದ ಗುರುತಿಗೆ ಮತ ಹಾಕಿ. ಈ ಬಾರಿ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಟೆ ನಾಡು ಚಿತ್ರದುರ್ಗದಲ್ಲಿ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಆಂತಕವಾದಿಗಳ ತುಷ್ಟಿಕರಣ
ಕಾಂಗ್ರೆಸ್​ ನಿಜಲಿಂಗಪ್ಪ ಅವರಿಗೆ ಅಪಮಾನ ಮಾಡಿದೆ. ಕಾಂಗ್ರೆಸ್ ಸಮಾಜದ ಜನರಲ್ಲಿ ಆಂತಕ ಸೃಷ್ಟಿಸಿದೆ. ಕಾಂಗ್ರೆಸ್​ ನನಗೆ 90ಕ್ಕೂ ಹೆಚ್ಚು ಬಾರಿ ನಿಂದನೆ ಮಾಡಿದೆ. ಕಾಂಗ್ರೆಸ್​ ಮೊದಲಿನಿಂದಲೂ ಆಂತಕವಾದಿಗಳ ತುಷ್ಟಿಕರಣ ಮಾಡುತ್ತಿದೆ. ಆತಂಕವಾದಿಗಳು ಸತ್ತಾಗ ಕಾಂಗ್ರೆಸ್​ ನಾಯಕರು ಕಣ್ಣೀರು ಹಾಕಿದ್ದರು. ರಾಜ್ಯದಲ್ಲೂ ಕಾಂಗ್ರೆಸ್​ ನಾಯಕರು ಆತಂಕವಾದಿಗಳ ಬೆಂಬಲಿಗೆ ನಿಲ್ಲುತ್ತದೆ ಎಂದರು.

ಬಡವರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ
ಕಾಂಗ್ರೆಸ್​ ಯಾವತ್ತು ಕೂಡ ಬಿಜೆಪಿಯ ಅಭಿವೃದ್ಧಿ ಬಗ್ಗೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಕೇವಲ 9 ವರ್ಷಗಳಲ್ಲಿ ಸಾಕಷ್ಟು ಮೆಡಿಕಲ್​ ಕಾಲೇಜು ಆರಂಭಿಸಿದೆ. ಚಿತ್ರದುರ್ಗದಲ್ಲೂ ಕೂಡ ಮೆಡಿಕಲ್​​ ಕಾಲೇಜ್​ ಆರಂಭಿಸಿದೆ. ಕೇಂದ್ರ ಸರ್ಕಾರದಿಂದ ನರ್ಸಿಂಗ್​ ಕಾಲೇಜ್​ ಆರಂಭಿಸಲಾಗಿದೆ ಎಂದು ಮೋದಿ ಹೇಳಿದರು. ಬಿಜೆಪಿ ಸರ್ಕಾರ ಬಡವರ ಮಕ್ಕಳಿಗಾಗಿ ಮೆಡಿಕಲ್​ ಕಾಲೇಜಿನ ಮತ್ತು ಇಂಜನಿಯರಿಂಗ್​ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವಂತೆ ವ್ಯವಸ್ಥೆ ಮಾಡುತ್ತಿದ್ದೇವೆ. ಇದರಿಂದ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುತ್ತದೆ. ರೈತರ ಮಕ್ಕಳಿಗೆ ರೈತ ನಿಧಿ ಯೋಜನೆ ಜಾರಿಗೆ ತಂದಿದ್ದೇವೆ. ಆದಿವಾಸಿ ಮಕ್ಕಳಿಗಾಗಿ 400ಕ್ಕೂ ಹೆಚ್ಚು ಏಕಲವ್ಯ ಶಾಲೆಗಳನ್ನು ಆರಂಭಿಸಿದ್ದೇವೆ. ಆದಿವಾಸಿಗಳ ವಿಕಾಸಕ್ಕೆ ಬಜೆಟ್​ನಲ್ಲಿ ಒಂದು ಕಾಲು ಲಕ್ಷ ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ ಎಂದರು.

ಅಭಿವೃದ್ಧಿಗೆ ವೇಗ
ಕಾಂಗ್ರೆಸ್​ ಮತ್ತು ಜೆಡಿಎಸ್​ ಆಡಳಿತದಲ್ಲಿ ಯೋಜನೆಗಳು ನಿಧಾನಗತಿಯಲ್ಲಿ ನಡೆಯುತ್ತಿತ್ತು. ಡಬಲ್​ ಇಂಜಿನ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈಲು, ರಸ್ತೆ, ವಿಮಾನ ನಿಲ್ದಾಣ​​ ನಿರ್ಮಾಣಕ್ಕೆ ವೇಗ ನೀಡಿದ್ದೇವೆ. ಕರ್ನಾಟಕದಲ್ಲಿ 9 ಕೈಗಾರಿಕಾ ಪ್ರದೇಶ ಸ್ಥಾಪಿಸುತ್ತೇವೆ. ಚಿತ್ರದುರ್ಗದಲ್ಲೂ 1 ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡುತ್ತೇವೆ. ಇದರಿಂದ ಯುವಕರಿಗೆ ಕೆಲಸ ದೊರೆಯುತ್ತದೆ ಎಂದು ಮೋದಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು