ಬೆಂಗಳೂರು: ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಬಹುದಿನಗಳ ಕುತೂಹಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಅದರಂತೆ ಶಕ್ತಿಕೇಂದ್ರವಾದ ಬೆಂಗಳೂರಿನ ಉಸ್ತುವಾರಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪಾಲಾಗಿದೆ.
ದಕ್ಷಿಣ ಕನ್ನಡ ಉಸ್ತುವಾರಿಯಾಗಿ ಸಚಿವ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗಕ್ಕೆ ನಿರೀಕ್ಷೆಯಂತೆ ಮಧು ಬಂಗಾರಪ್ಪ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಡಾ.ಎಂ.ಸಿ ಸುಧಾಕರ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿದೆ. ಉಡುಪಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಉಸ್ತುವಾರಿ ಸಚಿವೆಯಾಗಿ ನೇಮಕಗೊಂಡಿದ್ದಾರೆ.