News Karnataka Kannada
Thursday, March 28 2024
Cricket
ರಾಮನಗರ

ಹೆಚ್.ಡಿ.ಕುಮಾರಸ್ವಾಮಿಗೆ ಡಿ.ಕೆ.ಸುರೇಶ್ ಟಾಂಗ್

Photo Credit :

ರಾಮನಗರ: ಕೆಲವರು ಸುಳ್ಳನ್ನೇ ತಮ್ಮ ಮನೆದೇವರು ಮಾಡಿಕೊಂಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದರು.

ಡಿ.ಕೆ.ಬ್ರದರ್ಸ್‌ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಬಸವನಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಈಗ ಒಂದು ವರ್ಷದಿಂದೀಚೆಗೆ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಜನರು ಅವರಿಗೆ ಕಾಣಿಸುತ್ತಿರಲಿಲ್ಲ. ಇತ್ತೀಚೆಗೆ ಬಿಡದಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಬಂದ ನಂತರ ಜಿಲ್ಲೆಯಲ್ಲಿ ಹೇಳಿಕೊಂಡು ಓಡಾಡುತ್ತಿದ್ದಾರೆ. ಇದಕ್ಕೆ ನನ್ನ ತಕರಾರು ಏನಿಲ್ಲ ಎಂದು ಕುಮಾರಸ್ವಾಮಿ ಅವರ ಹೆಸರೇಳದೆ ಟೀಕಿಸಿದರು.

ಕಲ್ಲುಗೋಪಹಳ್ಳಿ, ಉಲ್ತಾರ್ ಹೊಸದೊಡ್ಡಿ, ದೊಡ್ಡಮಣ್ಣುಗುಡ್ಡೆ, ತೆಂಗಿನಕಲ್ಲು, ಮಾಕಳಿ ಅರಣ್ಯ ಭೂಮಿ ಸಮಸ್ಯೆ ಬಗ್ಗೆ ಮಾತಾಡುತ್ತಾರೆ. ಕಳೆದ ಹದಿನೈದು ವರ್ಷಗಳ ನಂತರ ಕೆಲವು ಗ್ರಾಮಗಳ ಹೆಸರು ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಹೇಸರೇಳುತ್ತಿರುವುದು ಸಂತಸದ ವಿಚಾರ. ಅವರಿಗೆ ಧನ್ಯವಾದ ಹೇಳುವುದಾಗಿ ವ್ಯಂಗ್ಯವಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು