ರಾಮನಗರ: ಕೆಲವರು ಸುಳ್ಳನ್ನೇ ತಮ್ಮ ಮನೆದೇವರು ಮಾಡಿಕೊಂಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದರು.
ಡಿ.ಕೆ.ಬ್ರದರ್ಸ್ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಬಸವನಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಈಗ ಒಂದು ವರ್ಷದಿಂದೀಚೆಗೆ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಜನರು ಅವರಿಗೆ ಕಾಣಿಸುತ್ತಿರಲಿಲ್ಲ. ಇತ್ತೀಚೆಗೆ ಬಿಡದಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಬಂದ ನಂತರ ಜಿಲ್ಲೆಯಲ್ಲಿ ಹೇಳಿಕೊಂಡು ಓಡಾಡುತ್ತಿದ್ದಾರೆ. ಇದಕ್ಕೆ ನನ್ನ ತಕರಾರು ಏನಿಲ್ಲ ಎಂದು ಕುಮಾರಸ್ವಾಮಿ ಅವರ ಹೆಸರೇಳದೆ ಟೀಕಿಸಿದರು.
ಕಲ್ಲುಗೋಪಹಳ್ಳಿ, ಉಲ್ತಾರ್ ಹೊಸದೊಡ್ಡಿ, ದೊಡ್ಡಮಣ್ಣುಗುಡ್ಡೆ, ತೆಂಗಿನಕಲ್ಲು, ಮಾಕಳಿ ಅರಣ್ಯ ಭೂಮಿ ಸಮಸ್ಯೆ ಬಗ್ಗೆ ಮಾತಾಡುತ್ತಾರೆ. ಕಳೆದ ಹದಿನೈದು ವರ್ಷಗಳ ನಂತರ ಕೆಲವು ಗ್ರಾಮಗಳ ಹೆಸರು ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಹೇಸರೇಳುತ್ತಿರುವುದು ಸಂತಸದ ವಿಚಾರ. ಅವರಿಗೆ ಧನ್ಯವಾದ ಹೇಳುವುದಾಗಿ ವ್ಯಂಗ್ಯವಾಡಿದರು.