News Kannada
Saturday, March 25 2023

ರಾಮನಗರ

ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರು ಅಣ್ಣತಮ್ಮಂದಿರ ರೀತಿಯಲ್ಲಿ ಬದುಕುತ್ತಿದ್ದಾರೆ: ಸಂತೋಷ್ ಬಾಬು

Photo Credit : News Kannada

ರಾಮನಗರ: ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರು ಅಣ್ಣತಮ್ಮಂದಿರ ರೀತಿಯಲ್ಲಿ ಬದುಕುತ್ತಿದ್ದಾರೆ. ನನಗೆ ಈ ಜಿಲ್ಲೆ ಮೇಲೆ ವಿಶೇಷವಾದ ಪ್ರೀತಿ ಗೌರವ ಇದೆ. ಯಾವನಾದ್ರು ಕೋಮು ಗಲಭೆ ಮಾಡಿದ್ರೆ ನಾನು ಏಕೆ ಹುಟ್ಟಿದೆ, ಯಾಕಾದ್ರೂ ತಪ್ಪು ಮಾಡಿದೆ  ಅಂತಾ ಪಶ್ಚಾತ್ತಾಪ ಪಡುವ ರೀತಿ ಮಾಡ್ತೀನಿ. ಧಮ್ ಇದ್ರೆ ಯಾರ ಕೈಲಿ ಹೇಳಿಸ್ತಿರೋ ಹೇಳಿಸಿ, ಅದನ್ನು ಕೂಡ ನೋಡ್ತೀನಿ. ಇದು ನಮ್ಮ ಜಿಲ್ಲೆ. ಇಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್  ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಂತಿಭಂಗ ಉಂಟು ಮಾಡುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ, ಕೋಮು ಸೌಹಾರ್ದತೆಗೆ ಹೆಸರಾಗಿರುವ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲಿನ ಹೆಸರಿನಲ್ಲಿ  ವಿದ್ಯಾರ್ಥಿಗಳ ಮಧ್ಯೆ ಒಡುಕು ಮೂಡಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಯಾರು ಸಹ ಮುಂದಾಗದೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ನ್ಯಾಯಾಲಯದ ತೀರ್ಪು ಬರುವವರೆಗೂ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಅವರಿವರ ಮೇಲೆ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಂಡು ಶಾಂತಿಗೆ ಭಂಗ ತರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಅಂತಹ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಇಲ್ಲಿ ಎರಡು ಧರ್ಮದವರ ಮಧ್ಯೆ ಸಾಮರಸ್ಯವಿದ್ದು, ಅದು ಕೆಡದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.
See also  ಸಿಎಂ ಎದುರೇ ಹೊಡೆದಾಟಕ್ಕೆ ಮುಂದಾದ‌ ಸಚಿವ ಅಶ್ವತ್ಥನಾರಾಯಣ-ಸಂಸದ‌ ಡಿ.ಕೆ.‌ ಸುರೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು