News Kannada
Wednesday, November 29 2023
ರಾಮನಗರ

ರಾಮನಗರ: ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ ಎಂದ ಹೆಚ್ ಡಿ ಕುಮಾರಸ್ವಾಮಿ

Photo Credit : Facebook

ರಾಮನಗರ: ಚಾಮುಂಡೇಶ್ವರಿ ಮತ್ತು ಜನರ ಆಶಿರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂದು  ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಅವರು ನಿನ್ನೆಚಾಮುಂಡೇಶ್ವರಿ ಕರಗ ಮಹೋತ್ಸವದ ಸಾಂಸ್ಕೃತಿಕ ‌ಕಾರ್ಯಕ್ರಮದಲ್ಲಿ ಮಾತನಾಡಿ, ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ. ಆದರೆ ಭಗವಂತನ ಇಚ್ಛೆ ಬೇರೆ ಇದೆ, ತಾಯಿ ಚಾಮುಂಡೇಶ್ವರಿ ಇಚ್ಛೆ ಬೇರೆ ಇದೆ. ಚಾಮುಂಡೇಶ್ವರಿ ಮತ್ತು ಜನರ ಆಶಿರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ,ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂದು ಹೇಳಿದರು.

ಕೋವಿಡ್​ನಿಂದ ಕಳೆದ ಮೂರು ವರ್ಷ  ಕರಗ ಮಾಡಲು ಸಾಧ್ಯವಾಗಿರಲಿಲ್ಲ. ನನಗೆ ರಾಜಕೀಯ ಜನ್ಮ ಕೊಟ್ಟಿರುವ ನಿಮ್ಮ ಜೊತೆ ಮನಸ್ಸಿನಲ್ಲಿ ಇರುವ ಭಾವನೆ ಹಂಚಿಕೊಳ್ಳಲು ಈ ಕಾರ್ಯಕ್ರಮ. ರೈತರು ನೆಮ್ಮದಿಯಿಂದ ಬದಕಲು ಚಾಮುಂಡೇಶ್ವರಿ ತಾಯಿ ಕರುಣಿಸಲಿ.

2019ರ ಜುಲೈ ತಿಂಗಳಲ್ಲಿ ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕುತಂತ್ರದಿಂದ ತೆಗೆಯಲಾಗಿತ್ತು. ತಾಯಿ ಚಾಮುಂಡೇಶ್ವರಿ ಆಶಿರ್ವಾದ ಪಡೆದು, ನಿಮ್ಮ ಸಮ್ಮುಖದಲ್ಲಿ ಪ್ರತಿಜ್ಞೆ ಮಾಡಿ ಹೊರಟಿದ್ದೇನೆ ಎಂದು ಹೇಳಿದರು.

 

See also  ಪಾದಯಾತ್ರೇ ಮಾಡೇ ಮಾಡುತ್ತೇವೆ, ನನ್ನ ಜೈಲಿಗೆ ಹಾಕಿದ್ರೂ ಸರಿಯೇ; ಡಿಕೆ ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು