News Kannada
Monday, June 05 2023
ರಾಮನಗರ

ರಾಮನಗರದ ಸಂಪರ್ಕ ಸೇತುವೆಯಲ್ಲಿ ಬಿರುಕು

Crack in Ramanagaram link bridge
Photo Credit : By Author

ರಾಮನಗರ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅರ್ಕಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮ ಹರೀಸಂದ್ರ-ತಿಮ್ಮೇಗೌಡನದೊಡ್ಡಿ ಸಂಪರ್ಕ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಕಂಡುಬಂದಿದೆ.

ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಹರೀಸಂದ್ರ ಗ್ರಾಮದ ಬಳಿ ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತಿಮ್ಮೇಗೌಡನದೊಡ್ಡಿ ಸಂಪರ್ಕ ಸೇತುವೆಯ ಪಿಲ್ಲರ್ ನೀರಿನ ರಭಸಕ್ಕೆ ಮುರಿದಿದ್ದು, ಇದರಿಂದ ಸೇತುವೆ ಮೇಲ್ಭಾಗದಲ್ಲಿ ಬಿರುಕು ಬಿಟ್ಟಿದೆ. ಹರೀಸಂದ್ರ ಗ್ರಾಮದಿಂದ ನಾನಾ ಗ್ರಾಮಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಸುಮಾರು ೨೦ ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಸಂಪರ್ಕ ಸೇತುವೆ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ನದಿಯಲ್ಲಿ ನೀರು ಪ್ರವಾಹ ಹೆಚ್ಚಾಗಿತ್ತು. ನೀರಿನ ಸೆಳೆತಕ್ಕೆ ಮಣ್ಣಿನ ಸವಕಳಿ ಆಗಿ ಸೇತುವೆಯ ಪಿಲ್ಲರ್ ಕೆಳ ಭಾಗ ಮುರಿದಿದ್ದು ಇದರಿಂದ ಅಲ್ಪ ಪ್ರಮಾಣದಲ್ಲಿ ಕುಸಿತ ಉಂಟಾಗಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಳೆ ಮುಂದುವರೆದು ಮಂಚನಬೆಲೆ ಜಲಾಶಯದಿಂದ ನೀರು ಹರಿವು ಹೆಚ್ಚಾದರೆ ಸೇತುವೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ನಿಚ್ಛಳವಾಗಿವೆ.

ಬೂರಗಮರದದೊಡ್ಡಿ, ಎಲೆದೊಡ್ಡಿ, ಮಾದಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಪ್ರತಿ ನಿತ್ಯ ಬೆಂಗಳೂರು-ಮೈಸೂರು ಹೆದ್ದಾರಿಗೆ, ವಿದ್ಯಾರ್ಥಿಗಳು ಶಾಲೆಗೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಲು ಹರೀಸಂದ್ರ- ತಿಮ್ಮೇಗೌಡನದೊಡ್ಡಿ ಸಂಪರ್ಕ ಸೇತುವೆ ಮೂಲಕವೇ ಸಂಚರಿಸುವುದು ವಾಡಿಕೆ. ಹಾಗೊಂದು ವೇಳೆ ಸೇತುವೆಗೆ ಧಕ್ಕೆಯಾದರೆ ಗ್ರಾಮಸ್ಥರು ಸುಗ್ಗನಹಳ್ಳಿಗೆ ಇಲ್ಲವೇ ರಾಮನಗರ ಮಾರ್ಗವಾಗಿ ಸುತ್ತಾಡಿ ಪ್ರಯಾಣಿಸಬೇಕಾಗುತ್ತದೆ.

ಪ್ರಮುಖ ಸೇತುವೆಯಲ್ಲಿ ಬಿರುಕು ಬಿಟ್ಟಿರುವುದನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೇತುವೆ ವೀಕ್ಷಣೆ ಮಾಡಿ ದುರಸ್ಥಿ ಕಾರ್ಯ ಶೀಘ್ರ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

See also  ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು