News Kannada
Tuesday, March 21 2023

ರಾಮನಗರ

ರಾಮನಗರ: ಬಿಜೆಪಿ ನಾಯಕರ ವಿಕೃತ ಮನಸ್ಥಿತಿ ತೋರಿಸುತ್ತಿದೆ – ಡಿ.ಕೆ.ಸುರೇಶ್

Photo Credit : By Author

ರಾಮನಗರ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಿಂದ ಜಲಪ್ರಳಯ ಉಂಟಾಗಿದ್ದು ಜನರು ಸಾವು ನೋವಿನಿಂದ ನರಳುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಜನಸ್ಪಂದನದ ಹೆಸರಿನಲ್ಲಿ ವೇದಿಕೆ ಮೇಲೆ ನೃತ್ಯಮಾಡಿ ಸಂಭ್ರಮಿಸುತ್ತಿರುವುದು ಅವರ ವಿಕೃತಿ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು.

ಹರೀಸಂದ್ರ ಗ್ರಾಮದಲ್ಲಿ ಮಳೆಯಿಂದ ಹಾನಿಗೊಂಡಿರುವ ಸೇತುವೆ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾಕಷ್ಟು ಅನಾಹುತವಾಗಿದೆ.

ಮನೆ, ಜಮೀನುಗಳು ಮುಳುಗಿ ಹಲವೆಡೆ ಹಾನಿ ಸಂಭವಿಸಿದೆ. ಜನರು ನೆರೆಯಿಂದ ನರಳುತ್ತಿದ್ದು ಬದುಕಲು ಮತ್ತು ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾಳೆ ಏನಾಗುವುದೋ ಎಂಬ ಚಿಂತೆಯಲ್ಲಿ ದಿನ ಕಳೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ನೃತ್ಯಮಾಡಿ ಸಂತೋಷ ಪಡುವುದು ವಿಕೃತಿ ಅಲ್ಲದೆ ಮತ್ತೇನು? ಇದನ್ನು ರಾಜ್ಯದ ಜನರು ಗಮನಿಸಬೇಕು ಎಂದರು.

ಜನರು ನೋವಿನಲ್ಲಿರುವಾಗ ಮಾಡಿರುವ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಆ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥರು ವಿಶ್ಲೇಷಣೆ ಮಾಡಬೇಕು. ಅವರ ಸರಕಾರದ ಯೋಗ್ಯತೆಯನ್ನು ತೋರಿಸಿದ್ದಾರೆ. ಇಂತಹವರು ಅಧಿಕಾರದಲ್ಲಿರುವ ಬದಲು ರಾಜಿನಾಮೆ ಕೊಟ್ಟು ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆರೆ ಮತ್ತು ರಾಜಕಾಲುವೆಗಳ ಒತ್ತುವರಿಯಿಂದ ರಾಮನಗರದಲ್ಲಿ ಪ್ರವಾಹ ಉಂಟಾಯಿತು ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ಮೈಸೂರು ಸಂಸದರು ದಯವಿಟ್ಟು ಮೈಸೂರು ಕೊಡಗಿನಲ್ಲಿ ಏನು ಮಾಡಬೇಕೋ ಅದನ್ನು ಮಾಡಲಿ. ಅನಾವಶ್ಯಕವಾಗಿ ಎಲ್ಲಾ ನನ್ನದೇ ಎಂದು ಹೇಳಿಕೊಂಡು ಪೋಸ್ ಕೊಡೋದು ಬೇಡ ಎಂದು ತಿರುಗೇಟು ನೀಡಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ವಿಚಾರದಲ್ಲಿ ನಿಮ್ಮದೇನಾದರು ಇದ್ದರೆ ಬನ್ನಿ, ನಾನೂ ಬರುತ್ತೇನೆ. ಎಲ್ಲಾ ವಿಚಾರಗಳನ್ನು ಜನರ ಮುಂದೆ ಇಡೋಣ. ಜನ ಕೇಳಿದ್ದಕ್ಕೆ ನಾವು, ನೀವು ಉತ್ತರ ಹೇಳೋಣ ಎಂದು ಸವಾಲು ಹಾಕಿದರು.

See also  ಪಕ್ಷ ಸೂಚಿಸಿದರೆ ನೂರಕ್ಕೆ ನೂರು ಕನಕಪುರದಿಂದ ಸ್ಪರ್ಧೆ ಮಾಡುತ್ತೇನೆ; ಸಿ.ಪಿ ಯೋಗೇಶ್ವರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು