News Kannada
Thursday, March 30 2023

ರಾಮನಗರ

ರಾಮನಗರ: ಟಿಪ್ಪರ್ ಲಾರಿಗೆ ಕಾರು ಡಿಕ್ಕಿ, ಮೂವರಿಗೆ ಗಾಯ

Ramanagara: Three injured as car collides with tipper lorry
Photo Credit : By Author

ರಾಮನಗರ: ರಸ್ತೆ ದುರಸ್ತಿಗಾಗಿ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಕಲ್ಲುಗೋಪಹಳ್ಳಿ ಬಳಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

ಪುರುಶೋತ್ತಮ್ ಕೆ.ಪಿ(37), ನಂದಿನಿ(30) ಹಾಗೂ 8 ತಿಂಗಳ ಹೆಣ್ಣು ಮಗು ಅಪಘಾತದಲ್ಲಿ ತೀವ್ರ ಗಾಯಗೊಂಡವರು. ಇವರು ಕನಕಪುರದ ಕುಂಬಾರಬೀದಿ ನಿವಾಸಿಗಳಾಗಿದ್ದು ಬೆಂಗಳೂರಿನ ತಲಘಟ್ಟಪುರದಲ್ಲಿ ನೆಲೆಸಿದ್ದರು. ರಾಮನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಸಂಜೆ 4.30ರ ಸಮಯದಲ್ಲಿ ಕಲ್ಲುಗೋಪಹಳ್ಳಿ ಬಳಿ ದುರ್ಘಟನೆ ಸಂಭವಿಸಿದೆ.

ಬೆಂಗಳೂರು ಕಡೆಗೆ ಸಾಗುವ ರಸ್ತೆಯಲ್ಲಿ ಡಿಬಿಎಲ್ ಕಂಪೆನಿಗೆ ಸೇರಿದ ಟಿಪ್ಪರ್ ಲಾರಿ ನಿಲ್ಲಿಸಿಕೊಂಡು ರಸ್ತೆ ವಿಭಜಕದ ದುರಸ್ತಿ ಕೆಲಸ ಮಾಡುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲನೆ ಮಾಡುತ್ತಿದ್ದ ಪುರುಷೋತ್ತಮ್ ಮತ್ತು ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಪರಿಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ತಕ್ಷಣವೇ ಬಿಡದಿಯ ಭರತ್ ಕೆಂಪಣ್ಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ದೊರಕಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಪುರುಷೋತ್ತಮ್ ಅವರನ್ನು ಬೆಂಗಳೂರಿನ ನಿಮ್ಮಾನ್ಸ್‌ಗೆ ಹಾಗೂ ಮಗುವನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡ ಕಾರಣ ಕೆಲಕಾಲ ಎಕ್ಸ್‌ಪ್ರೆಸ್ ಹೈವೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಆಗಮಿಸಿ ಸಂಚಾರವನ್ನು ಸುಗಮಗೊಳಿಸಿದರು. ಈ ಸಂಬಂಧ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ವಡೋದರಾ| ಭಾರೀ ಮಳೆಯ ಎಚ್ಚರಿಕೆ: ಗುಜರಾತ್ ನಲ್ಲಿ 6 ಎನ್ ಡಿ ಆರ್ ಎಫ್ ತಂಡಗಳ ನಿಯೋಜನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು