News Kannada
Wednesday, March 29 2023

ರಾಮನಗರ

ರಾಮನಗರದಲ್ಲಿಎರಡು ದಿನಗಳ ಜಾನಪದ ಲೋಕೋತ್ಸವ

Ramanagara: A two-day folk lokotsava
Photo Credit : News Kannada

ರಾಮನಗರ: ರಾಮನಗರದ ಜಾನಪದ ಲೋಕದಲ್ಲಿ ಜರುಗಿದ ಲೋಕೋತ್ಸವದಲ್ಲಿ ವೀರಾಜಪೇಟೆ ತಾಲೂಕಿನ ತೋರ ಗ್ರಾಮದ ಉರ್ಟಿ ಕೊಟ್ ಆಟ್ ನ ಹಿರಿಯ ಕಲಾವಿದೆ ಶ್ರೀಮತಿ ಶಾರದ ಸೋಮಯ್ಯ ಅವರಿಗೆ 2023ರ ಲಕ್ಷ್ಮಮ್ಮ ಎಚ್.ಎಲ್.ನಾಗೇಗೌಡ ಜಾನಪದ ಲೋಕ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಶ್ರೀ ಸದಾನಂದ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಅದ್ಭತೀಯ ಸಾಧನೆ ಮಾಡಿದ ಉತ್ತರ ಕರ್ನಾಟಕದ ಗೀಗಿ ಕಲಾವಿದೆ ಶ್ರೀಮತಿ ಎಲ್ಲವ್ವ ಮಾದರ, ಜಾನಪದ ಜಾದೂಗಾರ ಕಡಬ ಶ್ರೀನಿವಾಸ್ ಮುಂತಾದ ಒಟ್ಟು 17 ಕಲಾವಿದರು ಇಂದು ಪ್ರಶಸ್ತಿಗಳನ್ನು ಪಡೆದರು.

ಎರಡು ದಿನಗಳು ಜರುಗಿದ ಜಾನಪದ ಲೋಕೋತ್ಸವ ಸಮಾರಂಭದಲ್ಲಿ ರಾಜ್ಯದ ನೂರಾರು ಜಾನಪದ ಕಲಾವಿದರು ಭಾಗವಹಿಸಿ ಕಾರ್ಯಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಕೊಡಗಿನ ಕುಡಿಯರು ಅತ್ಯುತ್ತಮ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಸಿರಿಗಂಧ ಶ್ರೀನಿವಾಸಮೂರ್ತಿ ಅವರು ಕಾರ್ಯಕ್ರಮದ ದಾಖಲೀಕರಣ ಮತ್ತು ಕಲಾವಿದರ ಸಂಘಟನೆಯನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

See also  ಜೋಹಾನ್ಸ್‌ಬರ್ಗ್: ಶೂಟಿಂಗ್ ಸೆಟ್ ನಲ್ಲಿ ಎಂಟು ಮಂದಿ ಯುವತಿಯರ ಮೇಲೆ ಅತ್ಯಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು