News Kannada
Sunday, June 04 2023
ರಾಮನಗರ

ಕಾಂಗ್ರೆಸ್ ಅಧಿಕಾರಕ್ಕೆ ತರುವುದು ಮುಖ್ಯ: ಡಿ.ಕೆ.ಶಿವಕುಮಾರ್

It's important to bring Congress to power
Photo Credit : By Author

ರಾಮನಗರ: ನಾನು ಮುಖ್ಯಮಂತ್ರಿಯಾಗುವುದು ಮುಖ್ಯವಲ್ಲ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ದಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ್ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ನಡುವೆ ಕ್ರೆಡಿಟ್‌ವಾರ್ ಬಗ್ಗೆ ಪ್ರತಿಕ್ರಯಿಸಿದರು. ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯನ್ನು ರಚನೆ ಮಾಡಿದ್ದಾರೆ. ಅವರು ಅಭಿವೃಧ್ದಿ ಮಾಡಿದ್ದೇನೆ ಎನ್ನುವುದು ತಪ್ಪೇನು ಅಲ್ಲ. ಆದರೆ ಡಾ.ಸಿ.ಎನ್.ಅಶ್ವಥನಾರಾಯಣ ಅವರು, ಕ್ಲೀನ್ ಮಾಡಿಸುತ್ತೇನೆ ಅಂತ ಹೇಳಿದ್ದರು, ಮಾಡಿದ್ರಾ? ವೃಷಭಾವತಿ ನದಿ ನೋಡಿದ್ದಾರಾ? ಎಂದು ಕುಟುಕಿದರು. ತಾವು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಸಾಕಷ್ಟು ಅಭಿವೃದ್ದಿ ಮಾಡಿರುವುದಾಗಿ ತಿಳಿಸಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಈಗಾಗಲೆ ಹೆದ್ದಾರಿಯಲ್ಲಿ 80ಮಂದಿ ಸತ್ತಿದ್ದಾರೆ. ಸರ್ವಿಸ್ ರಸ್ತೆ ಪೂರ್ಣ ಮಾಡಲಿ, ಮೂಲ ಸೌಕರ್ಯಗಳನ್ನು ಒದಗಿಸಲಿ ಎಂದರು. ಪ್ರಧಾನಿ ಮೋದಿಯ ರಾಜ್ಯ ಪ್ರವಾಸದ ವಿಚಾರದಲ್ಲಿಯೂ ಟೀಕಾ ಪ್ರಹಾರ ನಡೆಸಿದ ಡಿ.ಕೆ.ಶಿವಕುಮಾರ್, ಚುನಾವಣೆ ಸಂದರ್ಭದಲ್ಲಿ ಬರುತ್ತಿದ್ದಾರೆ. ಕೊರೋನಾ ವೇಳೆ ಜನ ಸತ್ತಾಗ ಬರಲಿಲ್ಲ. ಈಗ ಬರ್‍ತಿದ್ದಾರೆ ಎಂದು ಟೀಕಿಸಿದರು.

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

See also  ಹಿಜಾಬ್‌-ಕೇಸರಿ ಶಾಲು ವಿವಾದ: ಕಾಲೇಜುಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು