News Kannada
Wednesday, March 22 2023

ರಾಮನಗರ

ದಶಪಥ ಟೋಲ್‌ ಸಂಗ್ರಹ ವಿರೋಧಿಸಿ ಜೆಡಿಎಸ್‌ ಮುಖಂಡ ನಿಖಿಲ್‌ ಪ್ರತಿಭಟನೆ

nikhil kumaraswamy protest against toll collection
Photo Credit : News Kannada

ರಾಮನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಕ್ಸ್‌ಪ್ರೆಸ್‌ ವೇಗೆ ಟೋಲ್‌ ವಸೂಲಿ ಮಾಡುತ್ತಿರುವ ಕ್ರಮ ಖಂಡಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ದಶಪಥ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಮಾರ್ಗದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ವೇಳೆ ಮಾಗಡಿ ಜೆಡಿಎಸ್ ಶಾಸಕ ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ರಾಮನಗರ ಹೊರವಲಯದ ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೆ, ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಹೆದ್ದಾರಿ ಮಧ್ಯೆ ಕುಳಿತು ಪಟ್ಟು ಹಿಡಿದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿ ವಾಹನವು ಫಾಸ್ಟ್ ಟ್ಯಾಗ್ ಹೊಂದಿದ್ದರೆ 135 ರೂ ಪಾವತಿಸಬೇಕು. ಫಾಸ್ಟ್ ಟ್ಯಾಗ್ ಇಲ್ಲದಿದ್ದರೆ, ಜನರು ದುಪ್ಪಟ್ಟು ಪಾವತಿಸಬೇಕಾಗುತ್ತದೆ. 50 ಕಿ.ಮೀ ಅಂತರದಲ್ಲಿ ಆಸ್ಪತ್ರೆ ಇರಬೇಕು. ಹೆದ್ದಾರಿಯಲ್ಲಿ ಶೌಚಾಲಯವಿಲ್ಲ. ಹೀಗಾಗಿ ಟೋಲ್ ವಸೂಲಿ ವಿರೋಧಿಸಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಪ್ರಾಧಿಕಾರ ಕೂಡಲೇ ಟೋಲ್ ವಸೂಲಿ ನಿಲ್ಲಿಸಿ, ಮೊದಲು ಮೂಲ ಸಮಸ್ಯೆಗಳನ್ನು ಸರಿಪಡಿಸಿ, ನಂತರ ಟೋಲ್ ವಸೂಲಿ ಮಾಡಬೇಕು ಎಂದು ನಿಖಿಲ್ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಗಡಿ ಶಾಸಕ ಎ.ಮಂಜುನಾಥ್ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ ದರ ಹೆಚ್ಚಳ ಖಂಡಿಸಿ ಕಾಂಗ್ರೆಸ್‌ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿವೆ. ಬಿಡದಿಯ ಶೇಷಗಿರಿಹಳ್ಳಿ ಬಳಿಯ ಸುಂಕದಕಟ್ಟೆ ಎದುರು ಬಂದು ಕಪ್ಪು ಬಾವುಟ ಪ್ರದರ್ಶಿಸಿ ರಸ್ತೆ ತಡೆ ನಡೆಸಿದರು. ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

See also  ರಾಮನಗರ: ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು