News Kannada
Saturday, September 23 2023
ರಾಮನಗರ

ಹಾಕಿ ಸ್ಟಿಕ್‌ನಿಂದ ಯುವಕನನ್ನು ಕೊಂದ ಪಾಪಿಗಳು

Restaurant manager shot dead in Hyderabad
Photo Credit : Pexels

ರಾಮನಗರ: ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾದಲ್ಲಿ ಭಾನುವಾರ ರಾತ್ರಿ ಟೋಲ್ ಪಡೆಯುವ ವಿಚಾರಕ್ಕೆ ಆರಂಭವಾದ ಗಲಾಟೆ ಯುವಕನ ಕೊಲೆಯೊಂದಿಗೆ ಅಂತ್ಯವಾಗಿದೆ.

ಮೃತ ಯುವಕನನ್ನು ತಾವರೆಕೆರೆ ಸಿಕ್ಕೆಪಾಳ್ಯ ನಿವಾಸಿ ಪವನ್ ನಾಯಕ್(26) ಎಂದು ಗುರುತಿಸಲಾಗಿದೆ. ಈತ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಬೆಂಗಳೂರು ಮೂಲದ ಯುವಕರ ಗುಂಪು ಹಣದ ವಿಚಾರವಾಗಿ ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ ಪವನ್ ನಾಯಕ್ ಜತೆಗೆ ನಿನ್ನೆ ರಾತ್ರಿ ಗಲಾಟೆ ಮಾಡಿದ್ದಾರೆ.

ಈ ವೇಳೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಹೊಡೆದಾಟ ನಡೆದಿದೆ. ಇದನ್ನೇ ಗುರಿಯಾಗಿಸಿಕೊಂಡ ಯುವಕರ ತಂಡ ಪವನ್‌ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಬೆನ್ನಟ್ಟಿ ಹಾಕಿ ಸ್ಟಿಕ್​ನಿಂದ ಹೊಡೆದು ಹೆಜ್ಜಲ ಸಮೀಪ ಕೊಲೆ ಮಾಡಿ ಪರಾರಿಯಾಗಿದೆ. ಮೃತದೇಹವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ದಾಖಲಿಸಿರುವ ಬಿಡದಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

See also  ರಾಮನಗರ: ಆಯ್ದ ಕೆರೆಗಳಲ್ಲಿ ಮೀನು ಕೃಷಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು