News Kannada
Friday, June 09 2023
ರಾಮನಗರ

ಜೆಡಿಎಸ್ ನ ವಂಶ ಪಾರಂಪರ್ಯ ರಾಜಕಾರಣ ವಿರುದ್ಧ ಸುಮಲತಾ ವಾಗ್ದಾಳಿ

Sumalta lashed out at JDS's dynastic politics
Photo Credit : News Kannada

ರಾಮನಗರ: ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್‌ನಲ್ಲಿ ತಂದೆ ಶಾಸಕ, ಮಗ ಶಾಸಕ, ಪ್ರಸ್ತುತ ಮೊಮ್ಮಗ ಶಾಸಕನಾಗಲು ಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರ ವೇಳೆ ಅವರು ಮಾತನಾಡಿದರು. ಅಂಬರೀಶ್ ಅವರ ರಾಜಕೀಯ ಜೀವನ ಆರಂಭವಾದದ್ದು ರಾಮನಗರದಿಂದ ಎಂದು ಸುಮಲತಾ ಹೇಳಿದರು. ರಾಮನಗರದ ಮತದಾರರೊಂದಿಗೆ ನಮ್ಮ ಕುಟುಂಬ ಉತ್ತಮ ಬಾಂಧವ್ಯ ಹೊಂದಿದೆ. ಬಿಜೆಪಿ ಮಹಿಳೆಯರನ್ನು ಗೌರವಿಸುತ್ತದೆ. ಮಂಡ್ಯದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದವರೇ ಇಲ್ಲಿ ಸ್ಪರ್ಧಿಸಿದ್ದಾರೆ. ನಾನು ಅವರ ಕುಟುಂಬದ ವಿರುದ್ಧ ಸ್ಪರ್ಧಿಸಿದ್ದು ಅವರ ದೃಷ್ಟಿಯಲ್ಲಿ ದೊಡ್ಡ ತಪ್ಪಾಗಿದೆ. ಮಹಿಳೆ ಎಂಬ ಗೌರವವಿಲ್ಲದೆ ಜೆಡಿಎಸ್ ಮಾತನಾಡುತ್ತಿದೆ ಎಂದು ಟೀಕಿಸಿದರು.

ಆದರೆ ಮಂಡ್ಯದ ಜನ ನನ್ನ ಬೆಂಬಲಕ್ಕೆ ನಿಂತರು. ಭದ್ರಕೋಟೆ, ಜಾತಿಯ ನಡುವೆಯೂ ಮಂಡ್ಯದ ಜನತೆ ಸ್ವಾಭಿಮಾನ ಕಳೆದುಕೊಳ್ಳಲಿಲ್ಲ. ನನ್ನನ್ನು ಆಯ್ಕೆ ಮಾಡುವ ಮೂಲಕ ವಂಶಪಾರಂಪರ್ಯ ಆಡಳಿತದ ಸೊಕ್ಕು ಮುರಿದರು ಎಂದರು.

See also  ಏ.17ರಂದು ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಅಧಿಕಾರ ಸ್ವೀಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು