News Karnataka Kannada
Tuesday, April 16 2024
Cricket
ತುಮಕೂರು

ಲಸಿಕೆ ಪಡೆಯದವರಿಗೆ ನೀರು, ವಿದ್ಯುತ್ ಸಂಪರ್ಕ ಸ್ಥಗಿತ

Vaccine 17072021
Photo Credit :

ತುಮಕೂರು: ತುಮಕೂರು ಜಿಲ್ಲೆ ಪಾವಗಡದದ ಕನುಮಲಚೆರವು ಬಡಾವಣೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮನೆಗೆ ವಿದ್ಯುತ್ ಸಂಪರ್ಕ ಮತ್ತು ನೀರಿನ ಸೌಲಭ್ಯ ಕಡಿತಗೊಳಿಸಲಾಗಿದೆ.

ಇಲ್ಲಿನ ನಿವಾಸಿಗಳು ಕೊರೋನಾ ಲಸಿಕೆ ಪಡೆಯಲು ಹಿಂಜರಿದಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಲಸಿಕೆ ಹಾಕಲು ಬಂದಿದ್ದ ಸಂದರ್ಭದಲ್ಲಿ ಸಮಯ ಕೇಳಲಾಗಿತ್ತು. ಕೂಲಿಕಾರ್ಮಿಕರು ಅಧಿಕವಾಗಿರುವುದರಿಂದ ಲಸಿಕೆ ಪಡೆದು ಮರುದಿನ ಕೆಲಸಕ್ಕೆ ರಜೆ ಹಾಕಬೇಕು. ಸಮಯ ಕೊಡಿ ಎಂದು ಕೇಳಿದ್ದರೂ, ಅಧಿಕಾರಿಗಳು ಏಕಾಏಕಿ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಾಗಿ ನಿವಾಸಿಗಳು ದೂರಿದ್ದಾರೆ. ಆದರೆ, ಇದನ್ನು ಅಲ್ಲಗಳೆದ ಅಧಿಕಾರಿಗಳು ಡೆಪಾಸಿಟ್ ಪಾವತಿಸದವರ ನೀರಿನ ಸಂಪರ್ಕ ಕಡಿತಗೊಳಿಸಲಾಗಿದೆ. ಲಸಿಕೆಗೂ ನೀರು, ವಿದ್ಯುತ್ ಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಕಳೆದ 20 ದಿನಗಳಿಂದ ಬಡಾವಣೆಗೆ ವಿದ್ಯುತ್ ಸಂಪರ್ಕವಿಲ್ಲದೆ ಮತ್ತು ಕುಡಿಯುವ ನೀರಿನ ಸೌಲಭ್ಯ ಇಲ್ಲದೆ ನಿವಾಸಿಗಳು ಪರದಾಡುವಂತಾಗಿದೆ ಎಂದು ಹೇಳಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು