News Kannada
Friday, September 22 2023
ತುಮಕೂರು

ತುಮಕೂರು: ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆ

Tumakuru: BJP joins JD(S)
Photo Credit : News Kannada

ತುಮಕೂರು: ತುಮಕೂರು ಗ್ರಾಮಾಂತರದಲ್ಲಿ ಶಾಸಕ ಡಿ.ಸಿ ಗೌರಿಶಂಕರ್ ಅವರ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.

ಗ್ರಾಮಾಂತರದ ಬಳ್ಳಗೆರೆಯ ಶಾಸಕರ ನಿವಾಸದಲ್ಲಿ ಇಂದು ನೆಡೆದ‌ ಜೆಡಿಎಸ್ ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಕ್ಷ ತೋರೆದು ಜೆಡಿಎಸ್ ಸೇರಿಕೊಂಡರು. ಈ ಸಂದರ್ಭದಲ್ಲಿ ಗೂಳೂರು ಜಿಲ್ಲಾ ಪಂಚಾಯತ್ ಜೆಡಿಎಸ್ ಘಟಕದ ಅಧ್ಯಕ್ಷ ಪಾಲನೇತ್ರಯ್ಯ, ಬೆಳಗುಂಬ ವೆಂಕಟೇಶ್ ಮುಂತಾದವರು ಭಾಗವಹಿಸಿದ್ದರು.

ಕಾರ್ಯಕರ್ತರಲ್ಲಿ ನಾನು ಶಾಸಕ ಸ್ಥಾನದಿಂದ ಅನರ್ಹ ಆಗಿದ್ದೇನೆ ಎಂದು ತಪ್ಪು ತಿಳುವಳಿಕೆಯ ಗೊಂದಲಗಳು ಮೂಡಿವೆ. ನಾನು ಶಾಸಕ ಸ್ಥಾನದಿಂದ ಅನರ್ಹನಾಗಿಲ್ಲ. ಕೇವಲ ಅಸಿಂಧು ಆಗಿದ್ದೇನೆ.ನಾನು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದೇನೆ. ಜೊತೆಗೆ ನನ್ನ ಮೇಲೆ ಬಂದಿರುವ ಆರೋಪಗಳಿಂದ ಮುಕ್ತನಾಗಲು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡುತ್ತಿದ್ಧೇನೆ. ಮುಂಬರುವ ಚುನಾವಣೆಯಲ್ಲಿ ನಾನೇ ತುಮಕೂರು ಗ್ರಾಮಾಂತರ ಅಭ್ಯರ್ಥಿ ಆಗಿ ಸ್ಪರ್ಧೆಯಲ್ಲಿ ಇರುತ್ತೇನೆ. ಕಾರ್ಯಕರ್ತರು ಆತಂಕ ಪಡಬಾರದು.
– ಡಿ.ಸಿ ಗೌರಿಶಂಕರ್, ಶಾಸಕ,ತುಮಕೂರು ಗ್ರಾಮಾಂತರ.

See also  ತುಮಕೂರು: ಖೈದಿಗಳಿಗೆ ಸೌಲಭ್ಯ ನೀಡುವವರ ವಿರುದ್ಧ ಕಠಿಣ ಕ್ರಮ- ಆರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು