News Kannada
Wednesday, May 31 2023
ತುಮಕೂರು

ತುಮಕೂರು: ಚುನಾವಣಾ ತರಬೇತಿಗೆ ಗೈರಾದವರ ಮೇಲೆ ಕಠಿಣ ಕ್ರಮ

Tumakuru: Strict action will be taken against those who skipped election training
Photo Credit : News Kannada

ತುಮಕೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಪಿಆರ್‌ಓ ಹಾಗೂ ಎಪಿಆರ್‌ಓಗಳಿಗಾಗಿ ಮಂಗಳವಾರ ಏರ್ಪಡಿಸಲಾಗಿದ್ದ ಚುನಾವಣಾ ತರಬೇತಿಗೆ ಗೈರು ಹಾಜರಾದವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134 ಅನ್ವಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.

ನಗರದ ಎಂಪ್ರೆಸ್ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಮಂಗಳವಾರ ಜರುಗಿದ ಪಿಆರ್‌ಓ ಹಾಗೂ ಎಪಿಆರ್‌ಓಗಳ ಚುನಾವಣಾ ತರಬೇತಿಯನ್ನುದ್ದೇಶಿಸಿ ಮಾತನಾಡಿದ ಅವರು, ತರಬೇತಿಗೆ ನಿಯೋಜಿಸಲಾಗಿದ್ದ ಕೆಲವು ಸಿಬ್ಬಂದಿಗಳು ಕಾರಣರಹಿತವಾಗಿ ಗೈರು ಹಾಜರಾಗಿರುವುದು ಗಮನಕ್ಕೆ ಬಂದಿದೆ. ಗೈರು ಹಾಜರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗೈರು ಹಾಜರಾದ ಅಧಿಕಾರಿ, ಸಿಬ್ಬಂದಿಗಳಿಗೆ ತಮ್ಮ ತಾಲ್ಲೂಕು, ಜಿಲ್ಲಾ ಮಟ್ಟದ ಮುಖ್ಯಸ್ಥರ ಮೂಲಕ ಸಕಾರಣ ನೀಡಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ. ಗೈರಾದ ಸಿಬ್ಬಂದಿಗಳ ಕಚೇರಿ ಮುಖ್ಯಸ್ಥರು ಖುದ್ದಾಗಿ ಹಾಜರಾಗಿ ಇಂದು(ಏಪ್ರಿಲ್ 12) ಸಂಜೆ ೫ ಗಂಟೆಯೊಳಗಾಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸ್ಪಷ್ಟೀಕರಣ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯಕ್ಕೆ ತೆರಳಿದವರಿಗೆ ಈ ತರಬೇತಿಯಿಂದ ವಿನಾಯತಿ ನೀಡಲಾಗಿದ್ದು, ಅವರಿಗೆ ಪ್ರತ್ಯೇಕವಾಗಿ ಚುನಾವಣಾ ತರಬೇತಿ ನೀಡಲಾಗುವುದು ಎಂದರಲ್ಲದೆ, ಜಿಲ್ಲೆಯಲ್ಲಿ ನ್ಯಾಯಸಮ್ಮತವಾಗಿ ವಿಧಾನಸಭಾ ಚುನಾವಣೆ ನಡೆಸುವ ನಿಟ್ಟಿನಲ್ಲಿ ೩೪೫೧ ಪಿಆರ್‌ಓ ಹಾಗೂ ೩೪೬೬ ಎಪಿಆರ್‌ಓಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ನಂತರ ಸಂಪನ್ಮೂಲ ವ್ಯಕ್ತಿಗಳು ವಿದ್ಯುನ್ಮಾನ ಮತಯಂತ್ರ, ಮತದಾನದ ಅಂಕಿ-ಅಂಶ, ಪಿಆರ್‌ಓ ದಿನಚರಿ, ನಮೂನೆ 17ಎ, 17ಸಿ ಮತ್ತಿತರ ಚುನಾವಣಾ ಮಾಹಿತಿ ಕುರಿತು ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಪಾಲಿಕೆ ಚುನಾವಣಾ ಶಾಖೆಯ ನಾಗಭೂಷಣ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

See also  ಮಂಡ್ಯ: ಹಿಂದೂ-ಮುಸ್ಲಿಮರು ಜಂಟಿಯಾಗಿ ಗಣೇಶ ಹಬ್ಬ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು