News Kannada
Wednesday, May 31 2023
ತುಮಕೂರು

ತುಮಕೂರು: ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ನಲ್ಲಿ ಗೌರವ – ಇಕ್ಬಾಲ್ ಅಹಮದ್

Tumkur: Loyal workers are respected in Congress - Iqbal Ahmed
Photo Credit : News Kannada

ತುಮಕೂರು: ಪಕ್ಷಕ್ಕೆ ನಿಷ್ಠಾವಂತನಾಗಿ ದುಡಿದರೆ ಅವಕಾಶಗಳು ಹುಡುಕಿಕೊಂಡು ಬರಲಿವೆ ಎಂಬುದಕ್ಕೆ ನನಗಿಂತ ಇನ್ನೊಂದು ಉದಾಹರಣೆಯಿಲ್ಲ ಎಂದು ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ತಿಳಿಸಿದರು.

ತುಮಕೂರು ನಗರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮುಖಂಡರು ಮತ್ತು ಅಪಾರ ಕಾರ್ಯಕರ್ತರ ಸಮ್ಮುಖದಲ್ಲಿ ತೆರಳಿ ಚುನಾವಣಾ ಅಧಿಕಾರಿ ದರ್ಶನ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಂತರ ‌ಏರ್ಪಡಿಸಿದ್ದ ಸುದ್ಧಿ ಗೋಷ್ಟಿಯಲ್ಲಿ ಮಾತನಾಡಿ, ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಳೆದ 20 ವರ್ಷಗಳಿಂದ ದುಡಿದ ನನಗೆ ಟಿಕೇಟ್ ದೊರೆಕಿರುವುದು. ಭವಿಷ್ಯದಲ್ಲಿ ಯುವಜನತೆ ಪಕ್ಷದ ಮೇಲೆ ಭರವಸೆ ಇಟ್ಟು ದುಡಿಯಲು ಪ್ರೇರಣೆಯಾಗಿದೆ ಎಂದರು.

ಭಾರತೀಯ ನ್ಯಾಷನಲ್ ಕಾಂಗ್ರೆಸ್ ಪಕ್ಷ ನನಗೆ ಏಪ್ರಿಲ್ 6 ರಂದೇ ತುಮಕೂರು ನಗರ ಕ್ಷೇತ್ರ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರೂ ಸಹ ಇದುವರೆಗೂ ಪಕ್ಷದಲ್ಲಿ ನನಗೆ ಟಿಕೆಟ್‌ ನೀಡಿದ್ದರಿಂದ ಸಹಜವಾಗಿಯೇ ಬೇಸರಗೊಂಡಿದ್ದ ಹಿರಿಯರು,ನನ್ನ ಸಹಪಾಠಿಗಳನ್ನು ಸಮಾಧಾನ ಪಡಿಸುವುದು ನನಗೆ ದೊಡ್ಡ ತಲೆನೋವಾಗಿತ್ತು. ಹಂತ ಹಂತವಾಗಿ ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ, ಇಂದು ಎಲ್ಲಾ ನಾಯಕರೊಂದಿಗೆ ಬಂದು ಉಮೇದುವಾರಿಕೆ ಸಲ್ಲಿಸಿದ್ದೇನೆ. ಎಲ್ಲಾ ನಾಯಕರು ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಇಕ್ಬಾಲ್ ಅಹಮದ್ ನುಡಿದರು.

ಪ್ರಸ್ತುತ ರಾಜ್ಯ ಸರಕಾರ ಶೇ40% ಸರಕಾರ. ಕುದುರೆ ವ್ಯಾಪಾರದಿಂದ ಅಧಿಕಾರ ಹಿಡಿದು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಎಸ್ಸಿ, ಎಸ್ಟಿ ಜನರನ್ನು ತೀರ ಕಡೆಗಣಿಸಿದೆ. ಕಾಂಗ್ರೆಸ್ ಈ ಎಲ್ಲಾ ಸಮುದಾಯಗಳ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ನೀಡಿದೆ. ಕಾಂಗ್ರೆಸ್‌ನ ಗೃಹಲಕ್ಷ್ಮಿ, ಅನ್ನಭಾಗ್ಯ, ನಿರುದ್ಯೋಗ ಭತ್ಯೆ ಕಾರ್ಯಕ್ರಮಗಳು ಜನರು ಕಾಂಗ್ರೆಸ್‌ಗೆ ಮತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಇಕ್ಬಾಲ್ ಅಹಮದ್ ನುಡಿದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ನಯಾಜ್ ಅಹಮದ್, ಜಿಲ್ಲಾ ಓಬಿಸಿ ಘಟಕದ ಗುರುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

See also  ತುಮಕೂರು: ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು